ಮೈಸೂರು

ಮೆಟ್ರೋ ದರ ಏರಿಕೆ| ಕಾಂಗ್ರೆಸ್‌ ಸರ್ಕಾರ, ಕೇಂದ್ರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಬಿಡಲಿ: ಡಿ.ವಿ.ಸದಾನಂದ ಗೌಡ

ಮೈಸೂರು: ಕಾಂಗ್ರೆಸ್‌ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ಭೇಟಿ ನೀಡಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ವಿಶೇಷ ಒತ್ತಡ ಹಾಕುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಮೆಟ್ರೋ ದರ ಕಡಿಮೆ ಮಾಡಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಹಾಗಾಗಿ ಮೆಟ್ರೋ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರವೇ ಒತ್ತಡ ಹೇರಬೇಕು ಎಂದರು.

ರಾಜ್ಯ ಸರ್ಕಾರ ಮೆಟ್ರೋ ದರ ಇಳಿಕೆ ಮಾಡುವ ಸಲುವಾಗಿ ನಮ್ಮನ್ನು ಕರೆದರೆ ನಾವು ಕೇಂದ್ರದ ಬಳಿ ಸರ್ಕಾರದೊಂದಿಗೆ ಜೊತೆಯಾಗಿಯೇ ಹೋಗುತ್ತೇವೆ. ಆದರೆ ಈ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನೂ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಒಂದು ಕೋಮಿನ ಜನರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸರಿಯಾಗಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ ಎಂದು ಲೇವಡಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ತಲೆಯಲ್ಲಿ ಕೇವಲ ಮುಡಾ ಪ್ರಕರಣವೇ ತುಂಬಿದ್ದು, ಸಿದ್ದರಾಮಯ್ಯ ಹೆಸರಿನಲ್ಲಿ ಇರುವ ಸಿದ್ದ ಎಂಬುದನ್ನು ತೆಗೆಯಬೇಕಾದ ಸ್ಥಿತಿ ಬಂದಿದೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದಾಗ ಬದಲಾಗಿದ್ದಾರೆ. ಆದರೆ ಪರಮೇಶ್ವರ್‌ ಅವರು ಕೇವಲ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ರಾಜಣ್ಣ, ಜಾರಕಿಹೊಳಿ, ಪರಮೇಶ್ವರ್ ಯಾರು ಮಂತ್ರಿ ಕೆಲಸ ಮಾಡುತ್ತಿಲ್ಲ. ಇವರೆಲ್ಲಾ ಕೇವಲ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್‌ ಅವರ ಪಾಪ ಸ್ವಲ್ಪ ಪರಿಹಾರ ಆಗಿರಬಹುದು

ಪ್ರಯಾಗ್‌ ರಾಜ್‌ನ ಮಹಾಕುಂಭಮೇಳ ಮತ್ತು ಟಿ.ನರಸೀಪುರದ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪುಣ್ಯಸ್ನಾನ ಮಾಡಿರುವುದರಿಂದ ಅವರ ಪಾಪ ಸ್ವಲ್ಪ ಪರಿಹಾರ ಆಗಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿಯಲ್ಲಿನ ಬಣಗಳ ಜಿದ್ದಾಜಿದ್ದಿ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ ಈ ರೀತಿಯ ಪರಿಸ್ಥಿತಿ ಎದುರಾಗಬಾರದಿತ್ತು. ಆದರೆ ನಮ್ಮಲ್ಲಿ ಆಂತರಿಕ ಅವ್ಯವಸ್ಥೆ ಇದೆ. ಸದ್ಯ ನಮ್ಮ ಪಕ್ಷ ರಾಜ್ಯದಲ್ಲಿ ದಯಾನೀಯ ಸ್ಥಿತಿಯಲ್ಲಿದ್ದು, ಹೈಕಮಾಂಡ್‌ ಮಧ್ಯ ಪ್ರವೇಶಿಸಬೇಕು ಎಂದರು.

 

ಅರ್ಚನ ಎಸ್‌ ಎಸ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

8 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

22 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

38 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

54 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago