ನಂಜನಗೂಡು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದು ತಮ್ಮ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಸ್ನೇಹಿತರ ಜೊತೆಗೂಡಿ ಸಮಯ ಕಳೆದರು.
ತಮ್ಮ ಹಳ್ಳಿಯ ಬೀದಿ ಬೀದಿಗಳಿಗೆ ಭೇಟಿ ನೀಡಿ ಸ್ನೇಹಿತರನ್ನು ಮಾತನಾಡಿಸಿ ತಮ್ಮ ಗ್ರಾಮದ ಮಕ್ಕಳೊಂದಿಗೆ ಶೆಟಲ್ ಕಾಕ್ ಆಡಿ ಖುಷಿಪಟ್ಟರು.
ಇದೇ ವೇಳೆ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದ ಅವರು, ತಮ್ಮ ಊರಿನ ರಸ್ತೆಗಳಲ್ಲಿ ಓಡಾಡುತ್ತ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದರು. ಬಾಲ್ಯದಿಂದ ಹಿಡಿದು ಇಲ್ಲಿಯ ತನಕ ನಮ್ಮೂರಿನ ನೆನಪುಗಳು ಚೆಂದ ಮತ್ತು ಅಷ್ಟೊಂದು ಗಾಢ. ಸಾಮಾಜಿಕವಾಗಿ ನನ್ನನ್ನು ಸಾಕಷ್ಟು ಗಟ್ಟಿಯಾಗಿಸಿದ ಮತ್ತು ಅವಮಾನಗಳನ್ನು ಮೆಟ್ಟಿ ನಿಲ್ಲುವ ಅಂತಃಶಕ್ತಿಯನ್ನು ನೀಡಿದ ಊರು ಸದಾ ಕಾಲ ನನ್ನ ನೆನಪಿನ ಭಾಗವಾಗಿರುವ ಸಂಗತಿ. ಊರಿನ ಭೇಟಿ ಎಂದರೆ ನೆನಪುಗಳ ಭೇಟಿ ಮತ್ತು ಹೊತ್ತು ತರುವ ಬುತ್ತಿ ಎಂದು ಸಂತಸ ವ್ಯಕ್ತಪಡಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…