ಮೈಸೂರು

ಡೈರಿ ರಾಜಕೀಯ : ಚರಂಡಿ ಪಾಲಾದ ಹಾಲು

ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.

ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

3 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

3 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

3 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

3 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

3 hours ago