ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.
ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…