ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.
ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…