ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.
ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…