ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ.
ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ ಡೈರಿಗೆ ಹೋಗಿ ಹಾಲು ಹಾಕುವಂತೆ ತಾಕೀತು ಮಾಡಿದ ಕಾರಣ ದಿಕ್ಕು ತೋಚದೆ ಗ್ರಾಮಸ್ಥರು ಹಾಲನ್ನು ಚರಂಡಿಗೆ ಸುರಿದಿದ್ದಾರೆ. ಈ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈವರೆಗೂ ಗ್ರಾಮದಲ್ಲೇ ಹಾಲು ಸ್ವೀಕಾರ ಮಾಡುತ್ತಿದ್ದ ಕಾರ್ಯದರ್ಶಿ ಸಚಿವ ವೆಂಕಟೇಶ್ ಅವರ ಕುಮ್ಮಕ್ಕಿನಿಂದ ಹಾಲು ಪಡೆಯದೆ ಮುಖ್ಯ ರಸ್ತೆ ದಾಟಿ ಮತ್ತೊಂದು ಬಿಎಂಸಿ ಕೇಂದ್ರಕ್ಕೆ ಹಾಲು ಹಾಕುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮತ್ತೊಂದು ಕೇಂದ್ರಕ್ಕೆ ಹಾಲು ಕೊಂಡೊಯ್ಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆ ದಾಟಿ ಹಾಲು ಹಾಕಲು ಸಮಸ್ಯೆಯಾಗುತ್ತದೆ. ರಸ್ತೆ ದಾಟುವ ವೇಳೆ ಅಪಘಾತವಾಗಿದೆ. ಇದರಿಂದ ಒಂದೇ ಡೈರಿಯಲ್ಲಿ ಹಾಲು ಹಾಕಿಸಿಕೊಳ್ಳಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…