ಮೈಸೂರು

ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು

ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ.

ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ  ಸೆನೆಟ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಸಿ, ಎಸ್‌ಟಿ ಸಮುದಾಯಗಳ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸುವ ಸಮಾರಂಭದಲ್ಲಿ ಹಲವು ವರ್ಷಗಳಿಂದ ಕನಸಾಗಿಯೇ ಉಳಿದಿರುವ ದಲಿತ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಕ್ಕೊತ್ತಾಯ ಕೇಳಿ ಬಂತು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ವಿವಿಧ ಜಾತಿಗಳಾಗಿ ಹರಿದು ಹಂಚಿ ಹೋಗಿದ್ದಾರೆ. ಈ ಎಲ್ಲ ಜಾತಿಗಳು ಒಗ್ಗೂಡಿದರೆ ರಾಜ್ಯ ರಾಜಕಾರಣದ ಚಿತ್ರಣವನ್ನೇ ಬದಲಾಯಿಸಬಹುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ತಮ್ಮ ಸ್ಪರ್ಧೆಯನ್ನು ಕೇವಲ ಮೀಸಲು ಕ್ಷೇತ್ರಕ್ಕೆ ಸೀಮಿತಗೊಳಿಸದೆ ಕರ್ನಾಟಕದಲ್ಲಿರುವ ೨೨೪ ಕ್ಷೇತ್ರಗಳಲ್ಲೂ ಸ್ಪರ್ಧಿಸಬೇಕು ಎಂಬ ಒತ್ತಾಯ ಬಲವಾಗಿ ಕೇಳಿ ಬರುವ ಮೂಲಕ ಮತ್ತೊಮ್ಮೆ ರಾಜಕೀಯ ಪಕ್ಷಗಳಲ್ಲಿರುವ ನಾಯಕರಿಗೆ ದಲಿತ ಸಿಎಂ ಜಪ ಮಾಡುವಂತೆ ಆಗ್ರಹಿಸಲಾಯಿತು.

ಒಗ್ಗಟ್ಟಿದ್ದರೆ ಗೆಲುವು ನಮ್ಮದೇ: ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದೇ ರೀತಿ ರಾಜ್ಯದ ಅಧಿಕಾರವನ್ನು ಪಡೆಯಲು ಎಸ್‌ಸಿ, ಎಸ್‌ಟಿ ಸಮುದಾಯ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇದೆ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರು ಯಾವುದೇ ಪಕ್ಷದಿಂದ ನಿಂತರೂ ಅವರನ್ನು ಬೆಂಬಲಿಸುವ ನಿರ್ಧಾರವನ್ನು ಶೋಷಿತ ಸಮುದಾಯದವರು ಮಾಡಬೇಕು ಎಂದು ಹಲವು ಸ್ವಾಮೀಜಿಗಳು ಹೇಳಿದರು.

ಶೋಷಿತ ಸಮುದಾಯದವರು ತಮ್ಮ ಸಮುದಾಯದ ಗುರುಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು. ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೀಸಲಾತಿ ಹೋರಾಟಕ್ಕೆ ದೊಡ್ಡ ಜಯ ದೊರೆತಿದೆ. ಈ ರೀತಿ ಎಲ್ಲ ಹೋರಾಟಗಳಲ್ಲಿ ಗೆಲುವು ಸಾಧಿಸಲು ಸ್ವಾಮೀಜಿಗಳ ಮಾರ್ಗದರ್ಶನ ಅವಶ್ಯಕತೆ ಇದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದೂವರೆ ಕೋಟಿ ಜನರು ಇದ್ದಾರೆ. ಜನಸಂಖ್ಯೆಯೇ ನಮ್ಮ ಶಕ್ತಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸುವ ಅವಶ್ಯಕತೆ ಇದೆ ಎಂದರು.

ಲೇಖಕ ಎಂ.ಗೋಪಿನಾಥ್ ಮಾತನಾಡಿ, ದೇಶದ ಮೂಲ ನಿವಾಸಿಗಳು ಯಜಮಾನರಾಗಬೇಕಾಗಿತ್ತು. ಆದರೆ, ಏತಕ್ಕೆ ಅವರು ಗುಲಾಮರಾದರು ಎಂಬುದು ಗೊತ್ತಿಲ್ಲ. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟದ ಹಾದಿ ತುಳಿಯಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗಿ ದೇವ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸಂತ ಸೇವಾಲಾಲ್ ಸ್ವಾಮೀಜಿ, ಮುಡುಕುತೊರೆ ಮಠದ ಶ್ರೀ ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಭೋವಿ ಮಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತಿತರ ಮುಖಂಡರು ಹಾಜರಿದ್ದರು.

ಅಂಬೇಡ್ಕರ್ ನಮಗೆ ನೀಡಿದ ಸಂವಿಧಾನವನ್ನು ನಾವು ಬೇರೆಯವರಿಗೆ ನೀಡುವ ಮೂಲಕ ಇಂದಿಗೂ ಶೋಷಣೆಗೆ ಗುರಿಯಾಗುತ್ತಿದ್ದೇವೆ. ಈ ಶೋಷಣೆಯಿಂದ ವಿಮೋಚನೆ ಹೊಂದಲು ನಾವು ಮುಖ್ಯಮಂತ್ರಿ ಪಟ್ಟವನ್ನು ಪಡೆಯಲು ಶ್ರಮಿಸಬೇಕು.

-ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಉರಿಲಿಂಗಿ ಪೆದ್ದಿ ಮಠ, ಗಾಂಧಿನಗರ

 

 

 

andolana

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

6 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

6 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

6 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

6 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

7 hours ago