ಮೈಸೂರು

ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು

ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ.

ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ  ಸೆನೆಟ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಸಿ, ಎಸ್‌ಟಿ ಸಮುದಾಯಗಳ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸುವ ಸಮಾರಂಭದಲ್ಲಿ ಹಲವು ವರ್ಷಗಳಿಂದ ಕನಸಾಗಿಯೇ ಉಳಿದಿರುವ ದಲಿತ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಕ್ಕೊತ್ತಾಯ ಕೇಳಿ ಬಂತು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ವಿವಿಧ ಜಾತಿಗಳಾಗಿ ಹರಿದು ಹಂಚಿ ಹೋಗಿದ್ದಾರೆ. ಈ ಎಲ್ಲ ಜಾತಿಗಳು ಒಗ್ಗೂಡಿದರೆ ರಾಜ್ಯ ರಾಜಕಾರಣದ ಚಿತ್ರಣವನ್ನೇ ಬದಲಾಯಿಸಬಹುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ತಮ್ಮ ಸ್ಪರ್ಧೆಯನ್ನು ಕೇವಲ ಮೀಸಲು ಕ್ಷೇತ್ರಕ್ಕೆ ಸೀಮಿತಗೊಳಿಸದೆ ಕರ್ನಾಟಕದಲ್ಲಿರುವ ೨೨೪ ಕ್ಷೇತ್ರಗಳಲ್ಲೂ ಸ್ಪರ್ಧಿಸಬೇಕು ಎಂಬ ಒತ್ತಾಯ ಬಲವಾಗಿ ಕೇಳಿ ಬರುವ ಮೂಲಕ ಮತ್ತೊಮ್ಮೆ ರಾಜಕೀಯ ಪಕ್ಷಗಳಲ್ಲಿರುವ ನಾಯಕರಿಗೆ ದಲಿತ ಸಿಎಂ ಜಪ ಮಾಡುವಂತೆ ಆಗ್ರಹಿಸಲಾಯಿತು.

ಒಗ್ಗಟ್ಟಿದ್ದರೆ ಗೆಲುವು ನಮ್ಮದೇ: ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದೇ ರೀತಿ ರಾಜ್ಯದ ಅಧಿಕಾರವನ್ನು ಪಡೆಯಲು ಎಸ್‌ಸಿ, ಎಸ್‌ಟಿ ಸಮುದಾಯ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇದೆ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರು ಯಾವುದೇ ಪಕ್ಷದಿಂದ ನಿಂತರೂ ಅವರನ್ನು ಬೆಂಬಲಿಸುವ ನಿರ್ಧಾರವನ್ನು ಶೋಷಿತ ಸಮುದಾಯದವರು ಮಾಡಬೇಕು ಎಂದು ಹಲವು ಸ್ವಾಮೀಜಿಗಳು ಹೇಳಿದರು.

ಶೋಷಿತ ಸಮುದಾಯದವರು ತಮ್ಮ ಸಮುದಾಯದ ಗುರುಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು. ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೀಸಲಾತಿ ಹೋರಾಟಕ್ಕೆ ದೊಡ್ಡ ಜಯ ದೊರೆತಿದೆ. ಈ ರೀತಿ ಎಲ್ಲ ಹೋರಾಟಗಳಲ್ಲಿ ಗೆಲುವು ಸಾಧಿಸಲು ಸ್ವಾಮೀಜಿಗಳ ಮಾರ್ಗದರ್ಶನ ಅವಶ್ಯಕತೆ ಇದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದೂವರೆ ಕೋಟಿ ಜನರು ಇದ್ದಾರೆ. ಜನಸಂಖ್ಯೆಯೇ ನಮ್ಮ ಶಕ್ತಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸುವ ಅವಶ್ಯಕತೆ ಇದೆ ಎಂದರು.

ಲೇಖಕ ಎಂ.ಗೋಪಿನಾಥ್ ಮಾತನಾಡಿ, ದೇಶದ ಮೂಲ ನಿವಾಸಿಗಳು ಯಜಮಾನರಾಗಬೇಕಾಗಿತ್ತು. ಆದರೆ, ಏತಕ್ಕೆ ಅವರು ಗುಲಾಮರಾದರು ಎಂಬುದು ಗೊತ್ತಿಲ್ಲ. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟದ ಹಾದಿ ತುಳಿಯಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗಿ ದೇವ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸಂತ ಸೇವಾಲಾಲ್ ಸ್ವಾಮೀಜಿ, ಮುಡುಕುತೊರೆ ಮಠದ ಶ್ರೀ ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಭೋವಿ ಮಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತಿತರ ಮುಖಂಡರು ಹಾಜರಿದ್ದರು.

ಅಂಬೇಡ್ಕರ್ ನಮಗೆ ನೀಡಿದ ಸಂವಿಧಾನವನ್ನು ನಾವು ಬೇರೆಯವರಿಗೆ ನೀಡುವ ಮೂಲಕ ಇಂದಿಗೂ ಶೋಷಣೆಗೆ ಗುರಿಯಾಗುತ್ತಿದ್ದೇವೆ. ಈ ಶೋಷಣೆಯಿಂದ ವಿಮೋಚನೆ ಹೊಂದಲು ನಾವು ಮುಖ್ಯಮಂತ್ರಿ ಪಟ್ಟವನ್ನು ಪಡೆಯಲು ಶ್ರಮಿಸಬೇಕು.

-ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಉರಿಲಿಂಗಿ ಪೆದ್ದಿ ಮಠ, ಗಾಂಧಿನಗರ

 

 

 

andolana

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

15 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

16 hours ago