ಮೈಸೂರು

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು.

ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಪ್ರವಾಸಿ ಮಂದಿರದ ಬಳಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಮಾತನಾಡಿ, ಮಹದೇವಪ್ಪನವರು ಸಿದ್ದರಾಮಯ್ಯ ಅವರು ಈ ಭಾಗದ ಹಿರಿಯ ದಲಿತ ರಾಜಕಾರಣಿಯಾಗಿದ್ದು, ಅವರ ಕಡೆಗಣನೆ ಸಲ್ಲದು ಎಂದರು.

ಮುಂದಿನ ಸಚಿವ ಸಂಪುಟದ ವಿಸ್ತರಣೆಯಲ್ಲಿ ಮಹದೇವಪ್ಪನವರಿಗೆ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ ಬೇಕು. ಆದರೆ ಅವರುಗಳಿಗೆ ಅಧಿಕಾರ ಕೊಡುವಾಗ ಮಾತ್ರ ಕಡೆಗಣನೆ ಏಕೆ? ಎಂದ ಆಲಗೂಡು ಶಿವಕುಮಾರ, ಬನ್ನಳ್ಳಿ ಸೋಮಣ್ಣ, ಚುಂಚನಹಳ್ಳಿ ಮಲ್ಲೇಶ, ಕಾರ್ಯ ಬಸವಣ್ಣ, ನಗರ್ಲೆ ಪುಟ್ಟಸ್ವಾಮಿ, ಮಂಜು ಮತ್ತಿತರರು ಪ್ರಥಮ ಕಂತಿನಲ್ಲೇ ಮಹದೇವಪ್ಪನವರಿಗೆ ಸಚಿವ ಸ್ಥಾನದ ಗೌರವವನ್ನು ಕಾಂಗ್ರೆಸ್ ನೀಡಬೇಕಿತ್ತು ಎಂದರು.

ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಅವರ ಗೆಲುವಿನಲ್ಲಿ ದಲಿತರ ಪಾತ್ರ ಅತ್ಯಂತ ಮಹತ್ತರವಾದದ್ದು. ಪ್ರತಿ ಚುನಾವಣೆಯಲ್ಲಿ ಶೇ.೯೦ರಷ್ಟು ದಲಿತರ ಮತ ಪಡೆಯುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡುವಾಗ ಮಾತ್ರ ಒಕ್ಕಲಿಗರು, ಲಿಂಗಾಯತರು ಮಾತ್ರ ನೆನಪಾಗುತ್ತಾರೆ ಎಂದು ಕಿಡಿಕಾರಿದರು.

ಈ ಭಾಗದ ಹಿರಿಯ ರಾಜಕಾರಣಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಬಳಿಕ ಹಳೇ ಮೈಸೂರು ಪ್ರಾಂತ್ಯಕ್ಕೆ ಮಹದೇವಪ್ಪನವರೇ ದಲಿತರ ಆಶಾಕಿರಣ. ಅವರನ್ನು ಕಡೆಗಣಿಸಿದರೆ ಮುಂದೆ ಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದಲ್ಲಿ ಕಷ್ಟವಾಗಲಿದೆ ಎಂದು ಎಚ್ಚರಿಸಿದರು.

ಪುತ್ರ ವ್ಯಾಮೋಹವೇ ಮಹದೇವಪ್ಪನವರ ಮಂತ್ರಿ ಸ್ಥಾನಕ್ಕೆ ತೊಡಕು ಎಂದ ಮುಖಂಡರು, 2ನೇ ಕಂತಿನಲ್ಲಿ ಮಹದೇವಪ್ಪನವರ ಹಿರಿತನವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಲೇಬೇಕು. ಮಹದೇವಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

27 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

31 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

34 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

38 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

43 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

47 mins ago