ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ ನಾಯಕರು ಆಗ್ರಹಿಸಿದರು.
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಪ್ರವಾಸಿ ಮಂದಿರದ ಬಳಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಮಾತನಾಡಿ, ಮಹದೇವಪ್ಪನವರು ಸಿದ್ದರಾಮಯ್ಯ ಅವರು ಈ ಭಾಗದ ಹಿರಿಯ ದಲಿತ ರಾಜಕಾರಣಿಯಾಗಿದ್ದು, ಅವರ ಕಡೆಗಣನೆ ಸಲ್ಲದು ಎಂದರು.
ಮುಂದಿನ ಸಚಿವ ಸಂಪುಟದ ವಿಸ್ತರಣೆಯಲ್ಲಿ ಮಹದೇವಪ್ಪನವರಿಗೆ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ದಲಿತರ ಮತ ಬೇಕು. ಆದರೆ ಅವರುಗಳಿಗೆ ಅಧಿಕಾರ ಕೊಡುವಾಗ ಮಾತ್ರ ಕಡೆಗಣನೆ ಏಕೆ? ಎಂದ ಆಲಗೂಡು ಶಿವಕುಮಾರ, ಬನ್ನಳ್ಳಿ ಸೋಮಣ್ಣ, ಚುಂಚನಹಳ್ಳಿ ಮಲ್ಲೇಶ, ಕಾರ್ಯ ಬಸವಣ್ಣ, ನಗರ್ಲೆ ಪುಟ್ಟಸ್ವಾಮಿ, ಮಂಜು ಮತ್ತಿತರರು ಪ್ರಥಮ ಕಂತಿನಲ್ಲೇ ಮಹದೇವಪ್ಪನವರಿಗೆ ಸಚಿವ ಸ್ಥಾನದ ಗೌರವವನ್ನು ಕಾಂಗ್ರೆಸ್ ನೀಡಬೇಕಿತ್ತು ಎಂದರು.
ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಅವರ ಗೆಲುವಿನಲ್ಲಿ ದಲಿತರ ಪಾತ್ರ ಅತ್ಯಂತ ಮಹತ್ತರವಾದದ್ದು. ಪ್ರತಿ ಚುನಾವಣೆಯಲ್ಲಿ ಶೇ.೯೦ರಷ್ಟು ದಲಿತರ ಮತ ಪಡೆಯುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡುವಾಗ ಮಾತ್ರ ಒಕ್ಕಲಿಗರು, ಲಿಂಗಾಯತರು ಮಾತ್ರ ನೆನಪಾಗುತ್ತಾರೆ ಎಂದು ಕಿಡಿಕಾರಿದರು.
ಈ ಭಾಗದ ಹಿರಿಯ ರಾಜಕಾರಣಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಬಳಿಕ ಹಳೇ ಮೈಸೂರು ಪ್ರಾಂತ್ಯಕ್ಕೆ ಮಹದೇವಪ್ಪನವರೇ ದಲಿತರ ಆಶಾಕಿರಣ. ಅವರನ್ನು ಕಡೆಗಣಿಸಿದರೆ ಮುಂದೆ ಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದಲ್ಲಿ ಕಷ್ಟವಾಗಲಿದೆ ಎಂದು ಎಚ್ಚರಿಸಿದರು.
ಪುತ್ರ ವ್ಯಾಮೋಹವೇ ಮಹದೇವಪ್ಪನವರ ಮಂತ್ರಿ ಸ್ಥಾನಕ್ಕೆ ತೊಡಕು ಎಂದ ಮುಖಂಡರು, 2ನೇ ಕಂತಿನಲ್ಲಿ ಮಹದೇವಪ್ಪನವರ ಹಿರಿತನವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಲೇಬೇಕು. ಮಹದೇವಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ ಎಂದರು.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…