ಮೈಸೂರು

ದಲಿತರು ಯದುವೀರ್ ಬೆಂಬಲಿಸಿ: ಎನ್.ಮಹೇಶ್

  • ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ
  • ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ

ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ದಲಿತ ಸಮುದಾಯದವರು ಮೈಸೂರು ರಾಜಮನೆತನದ ಕುಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಮಹೇಶ್ ಮನವಿ ಮಾಡಿದರು.

ವಿಜಯನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಭಾಗದಲ್ಲಿ ದಲಿತರು ಹೆಚ್ಚು ವಿದ್ಯಾವಂತರಾಗಲು ಮತ್ತು ಉದ್ಯೋಗ ಪಡೆಯಲು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ಒಡೆಯರ್ ಮೈಸೂರು ಸಂಸ್ಥಾನದ ವ್ಯಾಪ್ತಿಯಲ್ಲಿ ೮೦೦ ಶಾಲೆಗಳನ್ನು ತೆರೆದಿದ್ದರು. ಅಸ್ಪಶ್ಯತೆ ಆಚರಣೆ ಇರುವ ಸಂದರ್ಭದಲ್ಲಿ ದಲಿತರಿಗೆ ಅರಮನೆಗೆ ಪ್ರವೇಶ ನೀಡಿದ್ದರು. ಪ್ರಜಾಪ್ರತಿನಿಧಿ ಸಭೆಗೆ ೮ ಅಸ್ಪಶ್ಯರನ್ನು ಆಯ್ಕೆ ಮಾಡಿದ್ದರು.

ಭೂ ಸುಧಾರಣೆ ಕಾಯಿದೆ ತಂದು ದಲಿತರಿಗೆ ಭೂಮಿ ಹಕ್ಕು ನೀಡಿದ್ದರು. ಅಲ್ಲದೆ, ಸರ್ಕಾರಿ ಉದ್ಯೋಗದಲ್ಲೂ ಮೀಸಲಾತಿ ನೀಡಿದ್ದರು. ಇಂತಹ ಮೈಸೂರು ರಾಜಮನೆತನದ ಕುಡಿ ಯದುವೀರ್ ಅವರನ್ನು ಗೆಲ್ಲಿಸಿ ಅವರ ಋಣವನ್ನು ತೀರಿಸಬೇಕು ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

11 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

34 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

49 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago