ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ದಲಿತ ಸಮುದಾಯದವರು ಮೈಸೂರು ರಾಜಮನೆತನದ ಕುಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಮಹೇಶ್ ಮನವಿ ಮಾಡಿದರು.
ವಿಜಯನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಭಾಗದಲ್ಲಿ ದಲಿತರು ಹೆಚ್ಚು ವಿದ್ಯಾವಂತರಾಗಲು ಮತ್ತು ಉದ್ಯೋಗ ಪಡೆಯಲು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ಒಡೆಯರ್ ಮೈಸೂರು ಸಂಸ್ಥಾನದ ವ್ಯಾಪ್ತಿಯಲ್ಲಿ ೮೦೦ ಶಾಲೆಗಳನ್ನು ತೆರೆದಿದ್ದರು. ಅಸ್ಪಶ್ಯತೆ ಆಚರಣೆ ಇರುವ ಸಂದರ್ಭದಲ್ಲಿ ದಲಿತರಿಗೆ ಅರಮನೆಗೆ ಪ್ರವೇಶ ನೀಡಿದ್ದರು. ಪ್ರಜಾಪ್ರತಿನಿಧಿ ಸಭೆಗೆ ೮ ಅಸ್ಪಶ್ಯರನ್ನು ಆಯ್ಕೆ ಮಾಡಿದ್ದರು.
ಭೂ ಸುಧಾರಣೆ ಕಾಯಿದೆ ತಂದು ದಲಿತರಿಗೆ ಭೂಮಿ ಹಕ್ಕು ನೀಡಿದ್ದರು. ಅಲ್ಲದೆ, ಸರ್ಕಾರಿ ಉದ್ಯೋಗದಲ್ಲೂ ಮೀಸಲಾತಿ ನೀಡಿದ್ದರು. ಇಂತಹ ಮೈಸೂರು ರಾಜಮನೆತನದ ಕುಡಿ ಯದುವೀರ್ ಅವರನ್ನು ಗೆಲ್ಲಿಸಿ ಅವರ ಋಣವನ್ನು ತೀರಿಸಬೇಕು ಎಂದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…