ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ದಲಿತ ಸಮುದಾಯದವರು ಮೈಸೂರು ರಾಜಮನೆತನದ ಕುಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಮಹೇಶ್ ಮನವಿ ಮಾಡಿದರು.
ವಿಜಯನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಭಾಗದಲ್ಲಿ ದಲಿತರು ಹೆಚ್ಚು ವಿದ್ಯಾವಂತರಾಗಲು ಮತ್ತು ಉದ್ಯೋಗ ಪಡೆಯಲು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ಒಡೆಯರ್ ಮೈಸೂರು ಸಂಸ್ಥಾನದ ವ್ಯಾಪ್ತಿಯಲ್ಲಿ ೮೦೦ ಶಾಲೆಗಳನ್ನು ತೆರೆದಿದ್ದರು. ಅಸ್ಪಶ್ಯತೆ ಆಚರಣೆ ಇರುವ ಸಂದರ್ಭದಲ್ಲಿ ದಲಿತರಿಗೆ ಅರಮನೆಗೆ ಪ್ರವೇಶ ನೀಡಿದ್ದರು. ಪ್ರಜಾಪ್ರತಿನಿಧಿ ಸಭೆಗೆ ೮ ಅಸ್ಪಶ್ಯರನ್ನು ಆಯ್ಕೆ ಮಾಡಿದ್ದರು.
ಭೂ ಸುಧಾರಣೆ ಕಾಯಿದೆ ತಂದು ದಲಿತರಿಗೆ ಭೂಮಿ ಹಕ್ಕು ನೀಡಿದ್ದರು. ಅಲ್ಲದೆ, ಸರ್ಕಾರಿ ಉದ್ಯೋಗದಲ್ಲೂ ಮೀಸಲಾತಿ ನೀಡಿದ್ದರು. ಇಂತಹ ಮೈಸೂರು ರಾಜಮನೆತನದ ಕುಡಿ ಯದುವೀರ್ ಅವರನ್ನು ಗೆಲ್ಲಿಸಿ ಅವರ ಋಣವನ್ನು ತೀರಿಸಬೇಕು ಎಂದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…