ಮೈಸೂರು

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು.

ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಹಲವರು ಸಾಥ್‌ ನೀಡಿದರು.

ಬಳಿಕ ಜ್ಯೋತಿ ಬೆಳಗಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಂತೋಷದಿಂದ ದಂಡಿ ಮಾರಮ್ಮ ದೇವಸ್ಥಾನವನ್ನು ಉದ್ಘಾಟನೆ ಮಾಡಿದ್ದೇನೆ. ಕಾರ್ಯಕ್ರಮಕ್ಕೆ ಬರಲೇಬೇಕು ಅಂತ ಪಿಲ್ಲಹಳ್ಳಿ ಗ್ರಾಮದವರು ಒತ್ತಾಯ ಮಾಡಿದ್ರು. ದೇವರು ಕೇವಲ ದೇವಸ್ಥಾನ ಒಳಗೆ ಇರುತ್ತಾನೆ ಎನ್ನುವುದು ಎಲ್ಲರ ನಂಬಿಕೆ. ಆ ನಂಬಿಕೆಗೆ ನನ್ನ ವಿರೋಧವಿಲ್ಲ. ದೇವರು ಎಲ್ಲಾ ಕಡೆ ಇದ್ದಾನೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ. ನಾನು ಚುನವಣೆಗೆ ನಿಂತ ಸಮಯದಲ್ಲಿ ನನ್ನನ್ನು 83 ರಿಂದ ಗೆಲ್ಲಿಸಿಕೊಂಡು ಬಂದ್ರಿ. ಮೈಸೂರು ತಾಲ್ಲೂಕಿನ ಜನರ ಋಣವನ್ನು ಎಂದು ಕೂಡ ಮರೆಯುವುದಿಲ್ಲ. ನೀವು ಗೆಲ್ಲಿಸಿದ ಕಾರಣದಿಂದ ರಾಜ್ಯದ ಮುಖ್ಯಮಂತ್ರಿಯಾಗುವುದಕ್ಕೆ ಸಾಧ್ಯವಾಯಿತು. ಕೇವಲ ನನ್ನ ವ್ಯಕ್ತಿತ್ವ ಇದ್ದರೆ ಮುಖ್ಯಮಂತ್ರಿಯಾಗುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ಜನರ ಅರ್ಶಿವಾದ ಇರಬೇಕು. ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರಿಗೆ ನಾನು ಯಾವಾಗಲೂ ಕೃತಜ್ಞತೆಯ ಭಾವದಿಂದ ಇರುತ್ತೇನೆ. ಪಿಲ್ಲಹಳ್ಳಿ ಗ್ರಾಮದ ಜನ ನನ್ನನ್ನು ಯಾವತ್ತು ಕೈ ಬಿಟ್ಟಿಲ್ಲ. ನಿಮ್ಮ ಸಂಬಂಧ ನನ್ನನ್ನು ಇವತ್ತು ದೇವಸ್ಥಾನದ ಉದ್ಘಾಟನೆಗೆ ಬರುವುದಕ್ಕೆ ಕಾರಣವಾಗಿದೆ. ನಾನು ವೋಟು ಕೇಳಲು ಬರದೇ ಇದ್ರು ನೀವು ನನಗೆ ವೋಟು ಹಾಕುತ್ತೀರ. ದಂಡಿನ‌ಮಾರಮ್ಮ ದೇವಸ್ಥಾನ ನಮ್ಮ ಊರಿನಲ್ಲೂ ಇದೆ. ನಾನು ಚಿಕ್ಕವನಿಂದಾಗ ತಂಬಿಟ್ಟು ಅರತಿ ತೆಗೆದುಕೊಂಡು ಹೋಗುತ್ತಿದ್ದೇವು ಎಂದು ಬಾಲ್ಯದ ನೆನಪನ್ನು ಮೆಲುಕು ಹಾಕಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago