ಮೈಸೂರು

ಸಂಪುಟ ಸಭೆಯಲ್ಲಿ ದರ್ಶನ್‌ ಪ್ರಕರಣ ಚರ್ಚೆಯಾಯ್ತಾ? ಹೆಚ್‌ಸಿ ಮಹದೇವಪ್ಪ ಹೇಳಿದ್ದಿಷ್ಟು

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಕರಣವನ್ನು ಚರ್ಚೆ ಮಾಡಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ. ತಪ್ಪಿತಸ್ಥರಿಗೆಲ್ಲರಿಗೂ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸರು ಕೂಡ ಹೆಚ್ಚಿನ ನಿಗಾ ವಹಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಮಾಹಿತಿ ಹೊರಬರುತ್ತಿದೆ. ನಟ ದರ್ಶನ್‌ ಈ ರೀತಿ ಮಾಡಿದ್ದಾರೆ ಅಂದರೆ ಯಾರೂ ಕೂಡ ನಂಬಕ್ಕಾಗಲ್ಲ. ಈ ರೀತಿಯ ಘಟನೆಯಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಗಿದೆ, ಕಾನೂನು ಎಲ್ಲರಿಗೂ ಒಂದೇ, ಹಾಗಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತೆ ಎಂದರು.

andolana

Recent Posts

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

1 hour ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

1 hour ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

2 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

5 hours ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

10 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

10 hours ago