ಮೈಸೂರು

ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ : ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಹೇಳಿಕೆ

ನಂಜನಗೂಡು :  ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ. ಆದರೆ ನಂಜನಗೂಡು ಕಾಂಗ್ರೆಸ್‍ಗೆ ದರ್ಶನ್ ಧ್ರುವ ಅನಿವಾರ್ಯವಾಗಿದ್ದು, ಸದ್ಯ ಅವರ ಬಳಿ ಈ ಬಗ್ಗೆ ಕೂಲಂಕುಶವಾಗಿ ಮಾತನಾಡುವ ಪರಿಸ್ಥಿತಿಯಲ್ಲಿ ಅವರಿಲ್ಲ. ಶೀಘ್ರವೇ ಅವರಿಗೆ ನಿಮ್ಮೆಲ್ಲರ ಅಭಿಪ್ರಾಯವನ್ನು ಮನವರಿಕೆ ಮಾಡಿ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಕಂಠ ಭಾವುಕವಾಗಿ ನುಡಿದರು.

ನಗರದ ನಂದಿ ಕನ್ವೆನ್ಶನ್ ಹಾಲ್‍ನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಶಿಫಾರಸ್ಸು ಮಾಡುವ ಅಧಿಕಾರ ಹೊಂದಿದ್ದ ಆರ್.ಧ್ರುವನಾರಾಯಣ ಅವರು ಕತ್ತೆ ಅಚಿತೆ ಪಕ್ಷಕ್ಕೆ ದುಡಿಯುತ್ತಿದ್ದರು.

ಅವರು ಸ್ಪರ್ಧಿಸಲು ಬಯಸಿದ್ದ ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಅವರ ಒಬ್ಬರ ಹೆಸರನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂಬ ಬೇಸರ ನನಗೂ ಇದೆ. ಲಕ್ಷ್ಮಣ ರೇಖೆ ಮೀರಿದ ವರ್ತನೆಗಳು ಹಾಗೂ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದರಿಂದ ಒತ್ತಡಕ್ಕೆ ಸಿಲುಕಿದ್ದರು. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಹೊರಗೇ ಹಾಕದೇ ನಗುಮುಖದಲ್ಲೇ ಎಲ್ಲರೊಂದಿಗೂ ಮಾತನಾಡುತ್ತಿದ್ದರು. ಇದರಿಂದ ಗುಣಮುಖ ಆಗಿದ್ದ ಕಾಯಿಲೆಗಳು ಉಲ್ಬಣಗೊಂಡು ನಮ್ಮಿಂದ ದೂರ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ಸಂದರ್ಭದಲ್ಲಿ ಅವರನ್ನು ನಂಬಿರುವ ನಂಜನಗೂಡು ಕ್ಷೇತ್ರದ ಕಾರ್ಯಕರ್ತರಿಗೆ ಅವರ ಪ್ರತಿರೂಪವಾಗಿ ಅವರ ಪುತ್ರ ದರ್ಶನ್ ಧ್ರುವ ಕಾಂಗ್ರೆಸ್‍ಗೆ ಅನಿವಾರ್ಯವಾಗಿದ್ದಾರೆಯೇ ಹೊರತು ದರ್ಶನ್‍ಗೆ ರಾಜಕೀಯ ಅನಿವಾರ್ಯವಲ್ಲ. ಏಕೆಂದರೆ ಅವರು ವಿದೇಶದಲ್ಲಿ ಕಾನೂನು ಪದವಿ ವ್ಯಾಸಂಗ ಮಾಡಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಕೃಷಿಯಲ್ಲೂ ಸq್ರಯರಾಗಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿನ ಅಘಾತದಿಂದ ಹೊರ ಬಂದ ಬಳಿಕ ದರ್ಶನ್ ಧ್ರುವ ಅವರೊಂದಿಗೆ ಸಮಾಲೋಚಿಸಿ ತಂದೆಯ ಸ್ಥಾನವನ್ನು ತುಂಬುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ನಂಜನಗೂಡಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಯುಗಾದಿ ಹಬ್ಬದ ಬಳಿಕ ಆಯೋಜನೆ ಮಾಡಲಾಗುವುದು. ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಉದ್ದೇಶಿಸಲಾಗಿದ್ದು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರನ್ನು ಶ್ರದ್ಧಾಂಜಲಿ ಸಭೆಗೆ ಆಹ್ವಾನಿಸುವ ಜವಬ್ದಾರಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠು ಹಾಗೂ ಎಸ್.ಸಿ.ಬಸವರಾಜು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಕ್ಷೇತ್ರ ಉಸ್ತುವಾರಿಗಳಾದ ಹೀರೇಹಳ್ಳಿ ಸೋಮೇಶ್, ಬಿ.ಕೆ.ರವಿಕುಮಾರ್, ರಾಜ್ಯ ಕಾಂಗ್ರೆಸ್ ಎಸ್ಟಿ ಉಪಾಧ್ಯಕ್ಷ ದೊರೆಸ್ವಾಮಿನಾಯ್ಕ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಲತಾಸಿದ್ದಶೆಟ್ಟಿ, ಬಿಸಿಎಂ ಜಿಲ್ಲಾಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‍ರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಂ.ಮಾದಪ್ಪ, ಮುದ್ದುಮಾದಶೆಟ್ಟಿ ಸೇರಿದಂತೆ ಇತರರಿದ್ದರು.

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

4 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

8 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

9 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

9 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

9 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

9 hours ago