ಮೈಸೂರು

ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ : ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಹೇಳಿಕೆ

ನಂಜನಗೂಡು :  ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ. ಆದರೆ ನಂಜನಗೂಡು ಕಾಂಗ್ರೆಸ್‍ಗೆ ದರ್ಶನ್ ಧ್ರುವ ಅನಿವಾರ್ಯವಾಗಿದ್ದು, ಸದ್ಯ ಅವರ ಬಳಿ ಈ ಬಗ್ಗೆ ಕೂಲಂಕುಶವಾಗಿ ಮಾತನಾಡುವ ಪರಿಸ್ಥಿತಿಯಲ್ಲಿ ಅವರಿಲ್ಲ. ಶೀಘ್ರವೇ ಅವರಿಗೆ ನಿಮ್ಮೆಲ್ಲರ ಅಭಿಪ್ರಾಯವನ್ನು ಮನವರಿಕೆ ಮಾಡಿ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಕಂಠ ಭಾವುಕವಾಗಿ ನುಡಿದರು.

ನಗರದ ನಂದಿ ಕನ್ವೆನ್ಶನ್ ಹಾಲ್‍ನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಶಿಫಾರಸ್ಸು ಮಾಡುವ ಅಧಿಕಾರ ಹೊಂದಿದ್ದ ಆರ್.ಧ್ರುವನಾರಾಯಣ ಅವರು ಕತ್ತೆ ಅಚಿತೆ ಪಕ್ಷಕ್ಕೆ ದುಡಿಯುತ್ತಿದ್ದರು.

ಅವರು ಸ್ಪರ್ಧಿಸಲು ಬಯಸಿದ್ದ ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಅವರ ಒಬ್ಬರ ಹೆಸರನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂಬ ಬೇಸರ ನನಗೂ ಇದೆ. ಲಕ್ಷ್ಮಣ ರೇಖೆ ಮೀರಿದ ವರ್ತನೆಗಳು ಹಾಗೂ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದರಿಂದ ಒತ್ತಡಕ್ಕೆ ಸಿಲುಕಿದ್ದರು. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಹೊರಗೇ ಹಾಕದೇ ನಗುಮುಖದಲ್ಲೇ ಎಲ್ಲರೊಂದಿಗೂ ಮಾತನಾಡುತ್ತಿದ್ದರು. ಇದರಿಂದ ಗುಣಮುಖ ಆಗಿದ್ದ ಕಾಯಿಲೆಗಳು ಉಲ್ಬಣಗೊಂಡು ನಮ್ಮಿಂದ ದೂರ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ಸಂದರ್ಭದಲ್ಲಿ ಅವರನ್ನು ನಂಬಿರುವ ನಂಜನಗೂಡು ಕ್ಷೇತ್ರದ ಕಾರ್ಯಕರ್ತರಿಗೆ ಅವರ ಪ್ರತಿರೂಪವಾಗಿ ಅವರ ಪುತ್ರ ದರ್ಶನ್ ಧ್ರುವ ಕಾಂಗ್ರೆಸ್‍ಗೆ ಅನಿವಾರ್ಯವಾಗಿದ್ದಾರೆಯೇ ಹೊರತು ದರ್ಶನ್‍ಗೆ ರಾಜಕೀಯ ಅನಿವಾರ್ಯವಲ್ಲ. ಏಕೆಂದರೆ ಅವರು ವಿದೇಶದಲ್ಲಿ ಕಾನೂನು ಪದವಿ ವ್ಯಾಸಂಗ ಮಾಡಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಕೃಷಿಯಲ್ಲೂ ಸq್ರಯರಾಗಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿನ ಅಘಾತದಿಂದ ಹೊರ ಬಂದ ಬಳಿಕ ದರ್ಶನ್ ಧ್ರುವ ಅವರೊಂದಿಗೆ ಸಮಾಲೋಚಿಸಿ ತಂದೆಯ ಸ್ಥಾನವನ್ನು ತುಂಬುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ನಂಜನಗೂಡಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಯುಗಾದಿ ಹಬ್ಬದ ಬಳಿಕ ಆಯೋಜನೆ ಮಾಡಲಾಗುವುದು. ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಉದ್ದೇಶಿಸಲಾಗಿದ್ದು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರನ್ನು ಶ್ರದ್ಧಾಂಜಲಿ ಸಭೆಗೆ ಆಹ್ವಾನಿಸುವ ಜವಬ್ದಾರಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠು ಹಾಗೂ ಎಸ್.ಸಿ.ಬಸವರಾಜು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಕ್ಷೇತ್ರ ಉಸ್ತುವಾರಿಗಳಾದ ಹೀರೇಹಳ್ಳಿ ಸೋಮೇಶ್, ಬಿ.ಕೆ.ರವಿಕುಮಾರ್, ರಾಜ್ಯ ಕಾಂಗ್ರೆಸ್ ಎಸ್ಟಿ ಉಪಾಧ್ಯಕ್ಷ ದೊರೆಸ್ವಾಮಿನಾಯ್ಕ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಲತಾಸಿದ್ದಶೆಟ್ಟಿ, ಬಿಸಿಎಂ ಜಿಲ್ಲಾಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‍ರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಂ.ಮಾದಪ್ಪ, ಮುದ್ದುಮಾದಶೆಟ್ಟಿ ಸೇರಿದಂತೆ ಇತರರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago