ಮೈಸೂರು

ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ : ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಹೇಳಿಕೆ

ನಂಜನಗೂಡು :  ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ. ಆದರೆ ನಂಜನಗೂಡು ಕಾಂಗ್ರೆಸ್‍ಗೆ ದರ್ಶನ್ ಧ್ರುವ ಅನಿವಾರ್ಯವಾಗಿದ್ದು, ಸದ್ಯ ಅವರ ಬಳಿ ಈ ಬಗ್ಗೆ ಕೂಲಂಕುಶವಾಗಿ ಮಾತನಾಡುವ ಪರಿಸ್ಥಿತಿಯಲ್ಲಿ ಅವರಿಲ್ಲ. ಶೀಘ್ರವೇ ಅವರಿಗೆ ನಿಮ್ಮೆಲ್ಲರ ಅಭಿಪ್ರಾಯವನ್ನು ಮನವರಿಕೆ ಮಾಡಿ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಕಂಠ ಭಾವುಕವಾಗಿ ನುಡಿದರು.

ನಗರದ ನಂದಿ ಕನ್ವೆನ್ಶನ್ ಹಾಲ್‍ನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಶಿಫಾರಸ್ಸು ಮಾಡುವ ಅಧಿಕಾರ ಹೊಂದಿದ್ದ ಆರ್.ಧ್ರುವನಾರಾಯಣ ಅವರು ಕತ್ತೆ ಅಚಿತೆ ಪಕ್ಷಕ್ಕೆ ದುಡಿಯುತ್ತಿದ್ದರು.

ಅವರು ಸ್ಪರ್ಧಿಸಲು ಬಯಸಿದ್ದ ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಅವರ ಒಬ್ಬರ ಹೆಸರನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂಬ ಬೇಸರ ನನಗೂ ಇದೆ. ಲಕ್ಷ್ಮಣ ರೇಖೆ ಮೀರಿದ ವರ್ತನೆಗಳು ಹಾಗೂ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದರಿಂದ ಒತ್ತಡಕ್ಕೆ ಸಿಲುಕಿದ್ದರು. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಹೊರಗೇ ಹಾಕದೇ ನಗುಮುಖದಲ್ಲೇ ಎಲ್ಲರೊಂದಿಗೂ ಮಾತನಾಡುತ್ತಿದ್ದರು. ಇದರಿಂದ ಗುಣಮುಖ ಆಗಿದ್ದ ಕಾಯಿಲೆಗಳು ಉಲ್ಬಣಗೊಂಡು ನಮ್ಮಿಂದ ದೂರ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ಸಂದರ್ಭದಲ್ಲಿ ಅವರನ್ನು ನಂಬಿರುವ ನಂಜನಗೂಡು ಕ್ಷೇತ್ರದ ಕಾರ್ಯಕರ್ತರಿಗೆ ಅವರ ಪ್ರತಿರೂಪವಾಗಿ ಅವರ ಪುತ್ರ ದರ್ಶನ್ ಧ್ರುವ ಕಾಂಗ್ರೆಸ್‍ಗೆ ಅನಿವಾರ್ಯವಾಗಿದ್ದಾರೆಯೇ ಹೊರತು ದರ್ಶನ್‍ಗೆ ರಾಜಕೀಯ ಅನಿವಾರ್ಯವಲ್ಲ. ಏಕೆಂದರೆ ಅವರು ವಿದೇಶದಲ್ಲಿ ಕಾನೂನು ಪದವಿ ವ್ಯಾಸಂಗ ಮಾಡಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಕೃಷಿಯಲ್ಲೂ ಸq್ರಯರಾಗಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿನ ಅಘಾತದಿಂದ ಹೊರ ಬಂದ ಬಳಿಕ ದರ್ಶನ್ ಧ್ರುವ ಅವರೊಂದಿಗೆ ಸಮಾಲೋಚಿಸಿ ತಂದೆಯ ಸ್ಥಾನವನ್ನು ತುಂಬುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ನಂಜನಗೂಡಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಯುಗಾದಿ ಹಬ್ಬದ ಬಳಿಕ ಆಯೋಜನೆ ಮಾಡಲಾಗುವುದು. ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಉದ್ದೇಶಿಸಲಾಗಿದ್ದು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರನ್ನು ಶ್ರದ್ಧಾಂಜಲಿ ಸಭೆಗೆ ಆಹ್ವಾನಿಸುವ ಜವಬ್ದಾರಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠು ಹಾಗೂ ಎಸ್.ಸಿ.ಬಸವರಾಜು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಕ್ಷೇತ್ರ ಉಸ್ತುವಾರಿಗಳಾದ ಹೀರೇಹಳ್ಳಿ ಸೋಮೇಶ್, ಬಿ.ಕೆ.ರವಿಕುಮಾರ್, ರಾಜ್ಯ ಕಾಂಗ್ರೆಸ್ ಎಸ್ಟಿ ಉಪಾಧ್ಯಕ್ಷ ದೊರೆಸ್ವಾಮಿನಾಯ್ಕ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಲತಾಸಿದ್ದಶೆಟ್ಟಿ, ಬಿಸಿಎಂ ಜಿಲ್ಲಾಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‍ರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಂ.ಮಾದಪ್ಪ, ಮುದ್ದುಮಾದಶೆಟ್ಟಿ ಸೇರಿದಂತೆ ಇತರರಿದ್ದರು.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

5 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

13 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

17 hours ago