ಮೈಸೂರು

ದರ್ಶನ್ ಕುದುರೆಗಳು ಮಾರಾಟಕ್ಕಿವೆ: ಸೋಷಿಯಲ್‌ ಮೀಡಿಯಾದಲ್ಲಿ ಬೋರ್ಡ್‌ ವಿಡಿಯೋ ವೈರಲ್‌

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.

ಈ ಬೆನ್ನಲ್ಲೇ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್‌ ಫಾರ್ಮ್‌ ಹೌಸ್‌ನ ಮುಂದೆ ಅಳವಡಿಸಿರುವ ಬೋರ್ಡ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂದು ಬರೆಸಲಾಗಿದೆ.

ಇದನ್ನು ಓದಿ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌, ಈಗ ತೋಟದಲ್ಲಿ ಕುದುರೆ ನೋಡಿಕೊಳ್ಳಲು ಆಗದೇ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಫಾರ್ಮ್‌ ಹೌಸ್‌ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿರುವ ನಟ ದರ್ಶನ್‌ ಅವರು, ಈಗ ಕುದುರೆ ಮಾರಾಟಕ್ಕಿವೆ ಎಂದು ಬೋರ್ಡ್‌ನಲ್ಲಿ ಬರೆಸಿದ್ದಾರೆ. ಸದ್ಯ ತೋಟದ ಮುಂಭಾಗದ ಬೋರ್ಡ್ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕೊಲೆ ಆರೋಪದಲ್ಲಿ ದರ್ಶನ್‌ ಜೈಲು ಪಾಲಾದ ಹಿನ್ನೆಲೆಯಲ್ಲಿ ಕುದುರೆಗಳನ್ನು ಮಾರಾಟ ಮಾಡಲು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

18 mins ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

23 mins ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

28 mins ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

34 mins ago