ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್ ಹಾಕಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.
ಈ ಬೆನ್ನಲ್ಲೇ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ನ ಮುಂದೆ ಅಳವಡಿಸಿರುವ ಬೋರ್ಡ್ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂದು ಬರೆಸಲಾಗಿದೆ.
ಇದನ್ನು ಓದಿ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್
ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಈಗ ತೋಟದಲ್ಲಿ ಕುದುರೆ ನೋಡಿಕೊಳ್ಳಲು ಆಗದೇ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಫಾರ್ಮ್ ಹೌಸ್ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿರುವ ನಟ ದರ್ಶನ್ ಅವರು, ಈಗ ಕುದುರೆ ಮಾರಾಟಕ್ಕಿವೆ ಎಂದು ಬೋರ್ಡ್ನಲ್ಲಿ ಬರೆಸಿದ್ದಾರೆ. ಸದ್ಯ ತೋಟದ ಮುಂಭಾಗದ ಬೋರ್ಡ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕೊಲೆ ಆರೋಪದಲ್ಲಿ ದರ್ಶನ್ ಜೈಲು ಪಾಲಾದ ಹಿನ್ನೆಲೆಯಲ್ಲಿ ಕುದುರೆಗಳನ್ನು ಮಾರಾಟ ಮಾಡಲು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…