ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸರಾ ಆಚರಣೆಯ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಸರಾ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಸಮಯ, ಕಾರ್ಯಕ್ರಮದ ವಿವರಗಳ ಮಾಹಿತಿಯನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡಬೇಕು. ಜನಸಂದಣಿ ಆಗದಂತೆ ಅಗತ್ಯ ಸೂಚನೆಗಳನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡುತ್ತಿರಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಉಂಟಾಗದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿ.ಸಿ.ಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…