ಮೈಸೂರು

ದಸರಾ | ಬರಲಿವೆ ಮೈಸೂರಿಗೆ ವಿಶೇಷ ರೈಲು

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ.

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಹೀಗಿದೆ…

ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು
ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06272 2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್‌ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಮೈಸೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು
ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು
ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿಟಿಗೆ ತಲುಪಲಿದೆ.

ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ಎಲ್ಲಾ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌/ಡಿ ಬೋಗಿಗಳು ಇರಲಿವೆ.

ದಸರಾ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಹಾಗೂ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

46 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

49 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

55 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

59 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago