ಮೈಸೂರು: ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಜಿಪಂ ಸಿಇಓ ಕೆ.ಎಂ.ಗಾಯಿತ್ರಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ರೋಟರಿ ಐವರಿ ಸಿಟಿ, ಮೈಸೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಡಿಸೆಂಬರ್ 2 ಮತ್ತು 3 ರಂದು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬೂತ್ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ತಪ್ಪದೇ ಸಾರ್ವಜನಿಕರು, ಯುವ ಮತದಾರರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.ವೋಟರ್ ಹೆಲ್ಪ್ ಲೈನ್ ಆಪ್ ಮೂಲಕವೇ ಯುವ ಮತದಾರರು ಅರ್ಜಿ ಸಲ್ಲಿಸಬಹುದು ಹಾಗೂ ಮತಗಟ್ಟೆಯ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಯುವಜನತೆ ಮತದಾನದಲ್ಲಿ ಹೆಚ್ಚು ಪಾಲ್ಗೊಳ್ಳಲು ಹಾಗೂ ಅವರ ಹಕ್ಕಿನ ಬಗ್ಗೆ ಪ್ರೇರೇಪಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಕೆ.ಎಂ.ಗಾಯಿತ್ರಿ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನದಲ್ಲಿ ಭಾಗವಹಿಸುವಿಕೆ ಕಡಿಮೆ ಇರುವ ಕಾರಣ, ಇಂತಹ ಕಾರ್ಯಕ್ರಮಗಳ ಮೂಲಕ ನೊಂದಣಿ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹೆಚ್ಚೆಚ್ಚು ಜನರು ಹಾಗೂ ಯುವ ಮತದಾರರು ಭಾಗವಹಿಸಬೇಕು. ಆ ಮೂಲಕ ಆರೋಗ್ಯಕರ ಮತದಾನ ಪಟ್ಟಿ ತಯಾರಿಕೆಗೆ ಅನುವಾಗುತ್ತದೆ ಎಂದರು.
ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪ್ರಾರಂಭವಾದ ಜಾಥ, ನಗರದ ಚಿಕ್ಕಗಡಿಯಾರ ವೃತ್ತದಲ್ಲಿ ಅಂತ್ಯಗೊಂಡಿತು.
ವಿವಿಧ ಸಂಘ ಸಂಸ್ಥೆಯಿಂದ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪಆಯುಕ್ತರಾದ ಸೋಮಶೇಖರ್, ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಕ್ರೀಡಾಪಟು ಖುಷಿ ಸೇರಿದಂತೆ ಇತರರು ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…