ಮೈಸೂರು

ಮತದಾನ ನೊಂದಣಿ ಜಾಥಾ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

ಮೈಸೂರು: ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಜಿಪಂ ಸಿಇಓ ಕೆ.ಎಂ.ಗಾಯಿತ್ರಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ರೋಟರಿ ಐವರಿ ಸಿಟಿ, ಮೈಸೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಡಿಸೆಂಬರ್ 2 ಮತ್ತು 3 ರಂದು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬೂತ್ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ತಪ್ಪದೇ ಸಾರ್ವಜನಿಕರು, ಯುವ ಮತದಾರರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.ವೋಟರ್ ಹೆಲ್ಪ್ ಲೈನ್ ಆಪ್ ಮೂಲಕವೇ ಯುವ ಮತದಾರರು ಅರ್ಜಿ ಸಲ್ಲಿಸಬಹುದು ಹಾಗೂ ಮತಗಟ್ಟೆಯ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಯುವಜನತೆ ಮತದಾನದಲ್ಲಿ ಹೆಚ್ಚು ಪಾಲ್ಗೊಳ್ಳಲು ಹಾಗೂ ಅವರ ಹಕ್ಕಿನ ಬಗ್ಗೆ ಪ್ರೇರೇಪಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಕೆ.ಎಂ.ಗಾಯಿತ್ರಿ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನದಲ್ಲಿ ಭಾಗವಹಿಸುವಿಕೆ ಕಡಿಮೆ ಇರುವ ಕಾರಣ, ಇಂತಹ ಕಾರ್ಯಕ್ರಮಗಳ ಮೂಲಕ ನೊಂದಣಿ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹೆಚ್ಚೆಚ್ಚು ಜನರು ಹಾಗೂ ಯುವ ಮತದಾರರು ಭಾಗವಹಿಸಬೇಕು. ಆ ಮೂಲಕ ಆರೋಗ್ಯಕರ ಮತದಾನ ಪಟ್ಟಿ ತಯಾರಿಕೆಗೆ ಅನುವಾಗುತ್ತದೆ ಎಂದರು.
ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪ್ರಾರಂಭವಾದ ಜಾಥ, ನಗರದ ಚಿಕ್ಕಗಡಿಯಾರ ವೃತ್ತದಲ್ಲಿ ಅಂತ್ಯಗೊಂಡಿತು.

ವಿವಿಧ ಸಂಘ ಸಂಸ್ಥೆಯಿಂದ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪಆಯುಕ್ತರಾದ ಸೋಮಶೇಖರ್, ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಕ್ರೀಡಾಪಟು ಖುಷಿ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago