ಮೈಸೂರು

ಲೋಕಸಭಾ ಚುನಾವಣೆ 2024: ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ

ಮೈಸೂರು : ಲೋಕಸಭಾ ಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ರಾಜಕೀಯ ಪಕ್ಷಗಳಿಗೆ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಚುನಾವಣಾ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕು. ಈಗಿನಿಂದಲೇ ಚುನಾವಣೆಗೆ ಸಂಬಂಧಿಸಿದ ನಿಯಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಖಾಸಗಿ ಮನೆ, ಗೋಡೆ ಹಾಗೂ ರಸ್ತೆ ಬದಿ, ಸ್ಥಳೀಯ ಸಂಸ್ಥೆಗಳ ಕಟ್ಟಡ ಇತ್ಯಾದಿಗಳಲ್ಲಿ ರಾಜಕೀಯ ಪಕ್ಷದ ವಿಷಯಗಳ ಕುರಿತು ಗೋಡೆಬರಹ, ಪೋಸ್ಟರ್‌ಗಳು, ಬ್ಯಾನರ್, ಕಟೌಟ್‌ಗಳನ್ನು ಹಾಕಿದರೆ ಅವುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದರು.

ರಾಜಕೀಯ ಪಕ್ಷಗಳ ಸಂಬಂಧ ಕಾರ್ಯಕ್ರಮ ಸಂಬಂಧ ಅಧಿಕೃತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಒಂದು ವೇಳೆ ಅನುಮತಿ ಪಡೆಯದಿರುವುದು ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಚಾರಕ್ಕೆ ಮಕ್ಕಳನ್ನು ಬಳಸಬಾರದು. ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮ, ಕೇಬಲ್ ಟಿವಿ, ಪೇಸ್‌ಬುಕ್, ವಾಟ್ಸ ಆ್ಯಪ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡಿಕೊಂಡು ಯಾವುದೇ ಅರ್ಹ ಸೇರ್ಪಡೆಗಳಿದ್ದಲ್ಲಿ ಹಾಗೂ ತಿದ್ದುಪಡಿಗಳಿದ್ದಲ್ಲಿ ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕ್ರಮಕೈಗೊಳ್ಳುವಂತೆ ಹಾಗೂ ಕೊನೆಯ ಹಂತದಲ್ಲಿ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಅವಕಾಶವಾಗುವುದಿಲ್ಲವಾದ್ದರಿಂದ ಈಗಲೇ ಕ್ರಮಕೈಗೊಳ್ಳುವಂತೆ ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

5 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

8 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

8 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

8 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

10 hours ago