ಮೈಸೂರು

ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸಿದ್ದತೆ ಬಗ್ಗೆ ಮಾಹಿತಿ ನೀಡಿದ ಡಿಸಿ ರಾಜೇಂದ್ರ !

ಮೈಸೂರು : ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು,  ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಪ್ರಕಟವಾಗಿದ್ದು,  ಮುಂಬರುವ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಕೂಡಲೇ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 2072337 ಮತದಾರರಿದ್ದಾರೆ. ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 2202 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಇದಕ್ಕಾಗಿ ಮಾರ್ಚ್ 28ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುತ್ತದೆ, ಅಂದಿ‌ನಿಂದಲೇ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ.

ಏಪ್ರಿಲ್ 4ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿ‌ನವಾಗಿದೆ.

ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ. ಜೂನ್ 6ಕ್ಕೆ ಚುನಾವಣೆ ಮುಕ್ತಾಯ ದಿನಾಂಕ ಎಂದರು.

ಈ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟೆಚ್ಚರ : ಮೈಸೂರು ನಗರ ವ್ಯಾಪ್ತಿಗೆ ನರಸಿಂಹರಾಜ, ಕೃಷ್ಣರಾಜ, ಚಾಮರಾಜ ವಿಧಾನಸಭೆ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳು ಒಳಪಡುತ್ತವೆ.

ಚಾಮುಂಡೇಶ್ವರಿ ಕ್ಷೇತ್ರದ 167 ಮತಗಟ್ಟೆಗಳು ಹಾಗು ವರುಣ ವಿಧಾನಸಭಾ ಕ್ಷೇತ್ರದ 8 ಮತಗಟ್ಟೆಗಳು ಸೇರಿ ಒಟ್ಟು 971 ಮತಗಟ್ಟೆಗಳು ಇವೆ.

ಈ ಪೈಕಿ 220 ಕ್ರಿಟಿಕಲ್ ಬೂತ್ ಗಳಾಗಿದ್ದು, 751 ಸಾಮಾನ್ಯ ಬೂತ್ ಗಳಾಗಿವೆ. ಮೈಸೂರು ನಗರದ 10 ಕಡೆ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ.

ಚೆಕ್ ಪೋಸ್ಟ್ ಗಳಲ್ಲಿ ದಿನದ 24 ಗಂಟೆಯೂ ತಪಾಸಣೆ ನಡೆಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

 ರೌಡಿಶೀಟರ್‌ಗಳ ಮೇಲೆ ನಿಗಾ : ಮೈಸೂರು ನಗರದಲ್ಲಿ 731 ರೌಡಿಶೀಟರ್ ಗಳಿದ್ದು 583 ಮಂದಿ ಮೇಲೆ ಈಗಾಗಲೇ ನಿಗಾ ವಹಿಸಲಾಗಿದೆ. 69 ಮಂದಿಯನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ಸಿ ಆರ್ ಪಿ ಎಫ್ ನ ಒಂದು ತುಕಡಿ ಮೈಸೂರಿಗೆ ಆಗಮಿಸಿ ಪಥಸಂಚಲನ ನಡೆಸುತ್ತಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ಯಾರಾ ಮಿಲಿಟರಿ ತುಕಡಿಗಳು ಆಗಮಿಸಲಿವೆ. ಮೈಸೂರಿನಲ್ಲಿ 1077 ಮಂದಿ ಪರವಾನಗಿ ಪಡೆದು ಶಸ್ತ್ರಾಸ್ತ್ರ ಹೊಂದಿದ್ದಾರೆ.

ಈ ಪೈಕಿ ತೀವ್ರ ಅನಿವಾರ್ಯತೆ ಇರುವವರನ್ನು ಹೊರತುಪಡಿಸಿ ಉಳಿದವರ ಶಸ್ತ್ರಾಸ್ತ್ರಗಳನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ವಶಕ್ಕೆ ಪಡೆಯಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್ ಮಾತನಾಡಿ, ಮೈಸೂರು ಜಿಲ್ಲೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ ಎಂದು ಹೇಳಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ 1947 ಬೂತ್‌ಗಳು ಒಳಪಡಲಿವೆ. ಈ ಪೈಕಿ 305 ಕ್ರಿಟಿಕಲ್ ಬೂತ್ ಗಳಾಗಿವೆ.

ಉಳಿದವು ಸಾಮಾನ್ಯ ಬೂತ್ ಗಳಾಗಿವೆ. ಕ್ರಿಟಿಕಲ್ ಬೂತ್ ಗಳಿಗೆ ಹೆಚ್ಚಿನ ಭದ್ರತೆ ನೀಡಲಾಗುತ್ತದೆ.

ರಾಜ್ಯದ ಗಡಿ ಭಾಗ ಬಾವಲಿ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ 28 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.

ಮೈಸೂರು ಜಿಲ್ಲೆಯಾದ್ಯಂತ ರೌಡಿಶೀಟರ್‌ಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಕರ್ನಾಟಕದಲ್ಲಿ ಮೊದಲ ಹಂತದಲ್ಲೇ ನಡೆಯಲಿದೆ. ಈ ಕ್ಷೇತ್ರದ ಮತದಾನ ಏಪ್ರಿಲ್ 26ಕ್ಕೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 mins ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

20 mins ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

30 mins ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

32 mins ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

38 mins ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

40 mins ago