ಮೈಸೂರು

ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸಿದ್ದತೆ ಬಗ್ಗೆ ಮಾಹಿತಿ ನೀಡಿದ ಡಿಸಿ ರಾಜೇಂದ್ರ !

ಮೈಸೂರು : ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು,  ಲೋಕಸಭಾ ಚುನಾವಣೆ 2024ರ ವೇಳಾಪಟ್ಟಿ ಪ್ರಕಟವಾಗಿದ್ದು,  ಮುಂಬರುವ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಕೂಡಲೇ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ 2072337 ಮತದಾರರಿದ್ದಾರೆ. ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 2202 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಇದಕ್ಕಾಗಿ ಮಾರ್ಚ್ 28ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುತ್ತದೆ, ಅಂದಿ‌ನಿಂದಲೇ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ.

ಏಪ್ರಿಲ್ 4ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದ್ದು, ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿ‌ನವಾಗಿದೆ.

ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ. ಜೂನ್ 6ಕ್ಕೆ ಚುನಾವಣೆ ಮುಕ್ತಾಯ ದಿನಾಂಕ ಎಂದರು.

ಈ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟೆಚ್ಚರ : ಮೈಸೂರು ನಗರ ವ್ಯಾಪ್ತಿಗೆ ನರಸಿಂಹರಾಜ, ಕೃಷ್ಣರಾಜ, ಚಾಮರಾಜ ವಿಧಾನಸಭೆ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳು ಒಳಪಡುತ್ತವೆ.

ಚಾಮುಂಡೇಶ್ವರಿ ಕ್ಷೇತ್ರದ 167 ಮತಗಟ್ಟೆಗಳು ಹಾಗು ವರುಣ ವಿಧಾನಸಭಾ ಕ್ಷೇತ್ರದ 8 ಮತಗಟ್ಟೆಗಳು ಸೇರಿ ಒಟ್ಟು 971 ಮತಗಟ್ಟೆಗಳು ಇವೆ.

ಈ ಪೈಕಿ 220 ಕ್ರಿಟಿಕಲ್ ಬೂತ್ ಗಳಾಗಿದ್ದು, 751 ಸಾಮಾನ್ಯ ಬೂತ್ ಗಳಾಗಿವೆ. ಮೈಸೂರು ನಗರದ 10 ಕಡೆ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ.

ಚೆಕ್ ಪೋಸ್ಟ್ ಗಳಲ್ಲಿ ದಿನದ 24 ಗಂಟೆಯೂ ತಪಾಸಣೆ ನಡೆಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

 ರೌಡಿಶೀಟರ್‌ಗಳ ಮೇಲೆ ನಿಗಾ : ಮೈಸೂರು ನಗರದಲ್ಲಿ 731 ರೌಡಿಶೀಟರ್ ಗಳಿದ್ದು 583 ಮಂದಿ ಮೇಲೆ ಈಗಾಗಲೇ ನಿಗಾ ವಹಿಸಲಾಗಿದೆ. 69 ಮಂದಿಯನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ಸಿ ಆರ್ ಪಿ ಎಫ್ ನ ಒಂದು ತುಕಡಿ ಮೈಸೂರಿಗೆ ಆಗಮಿಸಿ ಪಥಸಂಚಲನ ನಡೆಸುತ್ತಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ಯಾರಾ ಮಿಲಿಟರಿ ತುಕಡಿಗಳು ಆಗಮಿಸಲಿವೆ. ಮೈಸೂರಿನಲ್ಲಿ 1077 ಮಂದಿ ಪರವಾನಗಿ ಪಡೆದು ಶಸ್ತ್ರಾಸ್ತ್ರ ಹೊಂದಿದ್ದಾರೆ.

ಈ ಪೈಕಿ ತೀವ್ರ ಅನಿವಾರ್ಯತೆ ಇರುವವರನ್ನು ಹೊರತುಪಡಿಸಿ ಉಳಿದವರ ಶಸ್ತ್ರಾಸ್ತ್ರಗಳನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ವಶಕ್ಕೆ ಪಡೆಯಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್ ಮಾತನಾಡಿ, ಮೈಸೂರು ಜಿಲ್ಲೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ ಎಂದು ಹೇಳಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ 1947 ಬೂತ್‌ಗಳು ಒಳಪಡಲಿವೆ. ಈ ಪೈಕಿ 305 ಕ್ರಿಟಿಕಲ್ ಬೂತ್ ಗಳಾಗಿವೆ.

ಉಳಿದವು ಸಾಮಾನ್ಯ ಬೂತ್ ಗಳಾಗಿವೆ. ಕ್ರಿಟಿಕಲ್ ಬೂತ್ ಗಳಿಗೆ ಹೆಚ್ಚಿನ ಭದ್ರತೆ ನೀಡಲಾಗುತ್ತದೆ.

ರಾಜ್ಯದ ಗಡಿ ಭಾಗ ಬಾವಲಿ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ 28 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.

ಮೈಸೂರು ಜಿಲ್ಲೆಯಾದ್ಯಂತ ರೌಡಿಶೀಟರ್‌ಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಕರ್ನಾಟಕದಲ್ಲಿ ಮೊದಲ ಹಂತದಲ್ಲೇ ನಡೆಯಲಿದೆ. ಈ ಕ್ಷೇತ್ರದ ಮತದಾನ ಏಪ್ರಿಲ್ 26ಕ್ಕೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

13 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

15 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago