ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17) ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀರಿನ ಒಳಹರಿವು ಹೆಚ್ಚಿದ್ದು, ಯಾವುದೇ ಸಂದರ್ಭದಲ್ಲಾದರೂ ಮತ್ತೆ ನೀರು ಹೊರ ಬಿಡಬಹುದು. ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…