ಮೈಸೂರು

ಮೈಸೂರು| ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವು

ಮೈಸೂರು: ಕಿಡಿಗೇಡಿಗಳ ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಅನಗಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳೆದ 5 ತಿಂಗಳ ಹಿಂದೆ ಕಿಡಿಗೇಡಿಗಳು ದೇವರ ಬಸವನಿಗೆ ಮಚ್ಚಿನಲ್ಲಿ ತೀವ್ರ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಬಸವನಿಗೆ ಕಳೆದ ಐದು ತಿಂಗಳಿಂದ ಗ್ರಾಮಸ್ಥರೇ ಚಿಕಿತ್ಸೆ ನೀಡಿ ಹಾರೈಕೆ ಮಾಡುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಸವ ಇಂದು ಮುಂಜಾನೆ ಸಾವನ್ನಪ್ಪಿದೆ.

ಊರಿನ ಗ್ರಾಮದ ಜನರು ಇದನ್ನು ಊರಬಸವ ಎಂದೇ ಕರೆಯುತ್ತಿದ್ದರು. ಬಸವನ ಮೇಲೆ ಹಲ್ಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಪ್ರಕರಣ ಜರುಗಿ ಐದು ತಿಂಗಳಾದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಇನ್ನು ಮುಂಜಾನೆಯಿಂದಲೇ ಗ್ರಾಮಸ್ಥರು ಹಾಗೂ ಅಕ್ಕ-ಪಕ್ಕದ ಊರಿನ ಜನರು ಬಸವನ ಅಂತಿಮ ದರ್ಶನ ಪಡೆಯುತ್ತಿದ್ದು, ಊರಿನಲ್ಲಿ ಮೆರವಣಿಗೆ ನಡೆಸಿದ ಬಳಿಕ ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.

ಇನ್ನು ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ಬಸವನ ಸಮಾಧಿಯ ಮೇಲೆ ಗೋಪುರ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದು, ಹಲ್ಲೆ ಮಾಡಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

14 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

35 mins ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

51 mins ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

2 hours ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

5 hours ago