death of a village bull
ಮೈಸೂರು: ಕಿಡಿಗೇಡಿಗಳ ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಅನಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ 5 ತಿಂಗಳ ಹಿಂದೆ ಕಿಡಿಗೇಡಿಗಳು ದೇವರ ಬಸವನಿಗೆ ಮಚ್ಚಿನಲ್ಲಿ ತೀವ್ರ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಬಸವನಿಗೆ ಕಳೆದ ಐದು ತಿಂಗಳಿಂದ ಗ್ರಾಮಸ್ಥರೇ ಚಿಕಿತ್ಸೆ ನೀಡಿ ಹಾರೈಕೆ ಮಾಡುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಸವ ಇಂದು ಮುಂಜಾನೆ ಸಾವನ್ನಪ್ಪಿದೆ.
ಊರಿನ ಗ್ರಾಮದ ಜನರು ಇದನ್ನು ಊರಬಸವ ಎಂದೇ ಕರೆಯುತ್ತಿದ್ದರು. ಬಸವನ ಮೇಲೆ ಹಲ್ಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ಜರುಗಿ ಐದು ತಿಂಗಳಾದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಇನ್ನು ಮುಂಜಾನೆಯಿಂದಲೇ ಗ್ರಾಮಸ್ಥರು ಹಾಗೂ ಅಕ್ಕ-ಪಕ್ಕದ ಊರಿನ ಜನರು ಬಸವನ ಅಂತಿಮ ದರ್ಶನ ಪಡೆಯುತ್ತಿದ್ದು, ಊರಿನಲ್ಲಿ ಮೆರವಣಿಗೆ ನಡೆಸಿದ ಬಳಿಕ ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.
ಇನ್ನು ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ಬಸವನ ಸಮಾಧಿಯ ಮೇಲೆ ಗೋಪುರ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದು, ಹಲ್ಲೆ ಮಾಡಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…