death of a village bull
ಮೈಸೂರು: ಕಿಡಿಗೇಡಿಗಳ ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಅನಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ 5 ತಿಂಗಳ ಹಿಂದೆ ಕಿಡಿಗೇಡಿಗಳು ದೇವರ ಬಸವನಿಗೆ ಮಚ್ಚಿನಲ್ಲಿ ತೀವ್ರ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಬಸವನಿಗೆ ಕಳೆದ ಐದು ತಿಂಗಳಿಂದ ಗ್ರಾಮಸ್ಥರೇ ಚಿಕಿತ್ಸೆ ನೀಡಿ ಹಾರೈಕೆ ಮಾಡುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಸವ ಇಂದು ಮುಂಜಾನೆ ಸಾವನ್ನಪ್ಪಿದೆ.
ಊರಿನ ಗ್ರಾಮದ ಜನರು ಇದನ್ನು ಊರಬಸವ ಎಂದೇ ಕರೆಯುತ್ತಿದ್ದರು. ಬಸವನ ಮೇಲೆ ಹಲ್ಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ಜರುಗಿ ಐದು ತಿಂಗಳಾದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಇನ್ನು ಮುಂಜಾನೆಯಿಂದಲೇ ಗ್ರಾಮಸ್ಥರು ಹಾಗೂ ಅಕ್ಕ-ಪಕ್ಕದ ಊರಿನ ಜನರು ಬಸವನ ಅಂತಿಮ ದರ್ಶನ ಪಡೆಯುತ್ತಿದ್ದು, ಊರಿನಲ್ಲಿ ಮೆರವಣಿಗೆ ನಡೆಸಿದ ಬಳಿಕ ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.
ಇನ್ನು ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ಬಸವನ ಸಮಾಧಿಯ ಮೇಲೆ ಗೋಪುರ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದು, ಹಲ್ಲೆ ಮಾಡಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…