death of a village bull
ಮೈಸೂರು: ಕಿಡಿಗೇಡಿಗಳ ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಅನಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ 5 ತಿಂಗಳ ಹಿಂದೆ ಕಿಡಿಗೇಡಿಗಳು ದೇವರ ಬಸವನಿಗೆ ಮಚ್ಚಿನಲ್ಲಿ ತೀವ್ರ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಬಸವನಿಗೆ ಕಳೆದ ಐದು ತಿಂಗಳಿಂದ ಗ್ರಾಮಸ್ಥರೇ ಚಿಕಿತ್ಸೆ ನೀಡಿ ಹಾರೈಕೆ ಮಾಡುತ್ತಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಸವ ಇಂದು ಮುಂಜಾನೆ ಸಾವನ್ನಪ್ಪಿದೆ.
ಊರಿನ ಗ್ರಾಮದ ಜನರು ಇದನ್ನು ಊರಬಸವ ಎಂದೇ ಕರೆಯುತ್ತಿದ್ದರು. ಬಸವನ ಮೇಲೆ ಹಲ್ಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣ ಜರುಗಿ ಐದು ತಿಂಗಳಾದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಇನ್ನು ಮುಂಜಾನೆಯಿಂದಲೇ ಗ್ರಾಮಸ್ಥರು ಹಾಗೂ ಅಕ್ಕ-ಪಕ್ಕದ ಊರಿನ ಜನರು ಬಸವನ ಅಂತಿಮ ದರ್ಶನ ಪಡೆಯುತ್ತಿದ್ದು, ಊರಿನಲ್ಲಿ ಮೆರವಣಿಗೆ ನಡೆಸಿದ ಬಳಿಕ ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.
ಇನ್ನು ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ಬಸವನ ಸಮಾಧಿಯ ಮೇಲೆ ಗೋಪುರ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದು, ಹಲ್ಲೆ ಮಾಡಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…