ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ ಕೆರೆಯ ನೀರು ಕಲುಶಿತವಾಗುತ್ತಿರುವ ಕಾರಣ ಕೆರೆಯಲ್ಲಿರುವ ಜಲಚರಗಳ ಮಾರಣಹೋಮ ನಡೆಯುತ್ತಿದೆ.
ಮುಂಜಾನೆ ಹಾಗೂ ಸಂಜೆ ವೇಳೆಯಲ್ಲಿ ಸುತ್ತಾ ಮುತ್ತಲ ಬಡಾವಣೆಯ ನೂರಾರು ಸ್ಥಳಿಯ ನಿವಾಸಿಗಳು ಈ ಕೆರೆಯಲ್ಲಿ ವಾಯುವಿಹಾರಕ್ಕೆ ಬರುತ್ತಾರೆ. ಈ ವೇಳೆ ಸತ್ತಿರುವ ರಾಶಿ ರಾಶಿ ಮೀನುಗಳು ಕಂಡು ಬರುತ್ತಿದ್ದು, ಅದರಿಂದ ಬರುತ್ತಿರುವ ದುರ್ವಾಸನೆಯಿಂದಾಗಿ ಸಾರ್ವಜಿಕರಿಗೆ ವಾಯುವಿಹಾರ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿರ್ಲಕ್ಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ : ಸುತ್ತಮುತ್ತಲಿನ ಕೈಗಾರಿಕ ಪ್ರದೇಶಗಳಿಂದ ಹೆಬ್ಬಾಳ ಕೆರೆಗೆ ಹರಿದು ಬರುತ್ತಿರುವ ರಾಸಾಯನಿಕ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಬೀತಿ ಸಾರ್ವಜನಿಕರಲ್ಲಿ ಮೂಡಿದೆ. ಅಲ್ಲದೆ ಇದರಿಂದ ಕೆರೆಯಲ್ಲಿರುವ ಸಾವಿರಾರು ಜಲಚರಗಳ ಮಾರಣಹೋಮಕ್ಕೆ ಕಾರಣವಾಗುತ್ತದೆ ಎಂಬ ಬೀತಿಯೂ ಶುರುವಾಗಿದೆ. ಮುಂದೊಂದು ದಿನ ಕೆರೆ ಸಂಪೂರ್ಣ ಕೊಳಚೆ ನೀರಿನ ಹೊಂಡ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.
ರಾಜಕಾಲುವೆಯಿಂದ ಕೊಳಚೆ ನೀರು : ಕೆರೆ ಸುತ್ತಲು ಇರುವ ಕಾರ್ಕಾನೆಗಳಿಂದ ಹೊರ ಬರುವ ರಾಸಾಯನಿಕ ನೀರು, ಹಾಗೂ ಸುತ್ತಲೂ ಇರುವ ಬಡಾವಣೆಗಳ ಯುಜಿಡಿ ನೀರು ರಾಜಕಾಲುವೆ ಮೂಲಕ ಹೆಬ್ಬಾಲ ಕೆರೆಗೆ ಬಂದು ಸೇರುತ್ತಿವೆ. ಈ ಎಲ್ಲಾ ಕಾರಣಗಳಿಂದ ಕೆರೆಯ ನೀರು ಕಲುಶಿತವಾಗುತ್ತಿದೆ.
ಅಧಿಕಾರಿಗಳ ನಿರ್ಲಕ್ಷ್ಯ : ಕೆರೆಯಲ್ಲಿ ಲಕ್ಷಾಂತರ ಮೀನುಗಳು ಸತ್ತು ಬಿದ್ದಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಯನ್ನು ಎತ್ತಿ ತೋರಿಸುತ್ತಿದೆ. ಸ್ಥಳಿಯರು ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…