ಮೈಸೂರು

ಹೆಬ್ಬಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ !

ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ  ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ ಕೆರೆಯ ನೀರು ಕಲುಶಿತವಾಗುತ್ತಿರುವ ಕಾರಣ ಕೆರೆಯಲ್ಲಿರುವ ಜಲಚರಗಳ ಮಾರಣಹೋಮ ನಡೆಯುತ್ತಿದೆ.

ಮುಂಜಾನೆ ಹಾಗೂ ಸಂಜೆ ವೇಳೆಯಲ್ಲಿ ಸುತ್ತಾ ಮುತ್ತಲ ಬಡಾವಣೆಯ ನೂರಾರು ಸ್ಥಳಿಯ ನಿವಾಸಿಗಳು ಈ ಕೆರೆಯಲ್ಲಿ ವಾಯುವಿಹಾರಕ್ಕೆ ಬರುತ್ತಾರೆ. ಈ ವೇಳೆ ಸತ್ತಿರುವ ರಾಶಿ ರಾಶಿ ಮೀನುಗಳು ಕಂಡು ಬರುತ್ತಿದ್ದು, ಅದರಿಂದ ಬರುತ್ತಿರುವ ದುರ್ವಾಸನೆಯಿಂದಾಗಿ ಸಾರ್ವಜಿಕರಿಗೆ ವಾಯುವಿಹಾರ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿರ್ಲಕ್ಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ : ಸುತ್ತಮುತ್ತಲಿನ ಕೈಗಾರಿಕ ಪ್ರದೇಶಗಳಿಂದ ಹೆಬ್ಬಾಳ ಕೆರೆಗೆ ಹರಿದು ಬರುತ್ತಿರುವ ರಾಸಾಯನಿಕ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಬೀತಿ ಸಾರ್ವಜನಿಕರಲ್ಲಿ ಮೂಡಿದೆ. ಅಲ್ಲದೆ ಇದರಿಂದ ಕೆರೆಯಲ್ಲಿರುವ ಸಾವಿರಾರು ಜಲಚರಗಳ ಮಾರಣಹೋಮಕ್ಕೆ ಕಾರಣವಾಗುತ್ತದೆ ಎಂಬ ಬೀತಿಯೂ ಶುರುವಾಗಿದೆ. ಮುಂದೊಂದು ದಿನ ಕೆರೆ ಸಂಪೂರ್ಣ ಕೊಳಚೆ ನೀರಿನ ಹೊಂಡ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ರಾಜಕಾಲುವೆಯಿಂದ ಕೊಳಚೆ ನೀರು : ಕೆರೆ ಸುತ್ತಲು ಇರುವ ಕಾರ್ಕಾನೆಗಳಿಂದ ಹೊರ ಬರುವ ರಾಸಾಯನಿಕ ನೀರು, ಹಾಗೂ ಸುತ್ತಲೂ ಇರುವ ಬಡಾವಣೆಗಳ ಯುಜಿಡಿ ನೀರು ರಾಜಕಾಲುವೆ ಮೂಲಕ ಹೆಬ್ಬಾಲ ಕೆರೆಗೆ ಬಂದು ಸೇರುತ್ತಿವೆ. ಈ ಎಲ್ಲಾ ಕಾರಣಗಳಿಂದ ಕೆರೆಯ ನೀರು ಕಲುಶಿತವಾಗುತ್ತಿದೆ.

ಅಧಿಕಾರಿಗಳ ನಿರ್ಲಕ್ಷ್ಯ : ಕೆರೆಯಲ್ಲಿ ಲಕ್ಷಾಂತರ ಮೀನುಗಳು ಸತ್ತು ಬಿದ್ದಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಯನ್ನು ಎತ್ತಿ ತೋರಿಸುತ್ತಿದೆ. ಸ್ಥಳಿಯರು ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

7 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

7 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

8 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

9 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

9 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

10 hours ago