ಮೈಸೂರು

ಹೆಬ್ಬಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ !

ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ  ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ ಕೆರೆಯ ನೀರು ಕಲುಶಿತವಾಗುತ್ತಿರುವ ಕಾರಣ ಕೆರೆಯಲ್ಲಿರುವ ಜಲಚರಗಳ ಮಾರಣಹೋಮ ನಡೆಯುತ್ತಿದೆ.

ಮುಂಜಾನೆ ಹಾಗೂ ಸಂಜೆ ವೇಳೆಯಲ್ಲಿ ಸುತ್ತಾ ಮುತ್ತಲ ಬಡಾವಣೆಯ ನೂರಾರು ಸ್ಥಳಿಯ ನಿವಾಸಿಗಳು ಈ ಕೆರೆಯಲ್ಲಿ ವಾಯುವಿಹಾರಕ್ಕೆ ಬರುತ್ತಾರೆ. ಈ ವೇಳೆ ಸತ್ತಿರುವ ರಾಶಿ ರಾಶಿ ಮೀನುಗಳು ಕಂಡು ಬರುತ್ತಿದ್ದು, ಅದರಿಂದ ಬರುತ್ತಿರುವ ದುರ್ವಾಸನೆಯಿಂದಾಗಿ ಸಾರ್ವಜಿಕರಿಗೆ ವಾಯುವಿಹಾರ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿರ್ಲಕ್ಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ : ಸುತ್ತಮುತ್ತಲಿನ ಕೈಗಾರಿಕ ಪ್ರದೇಶಗಳಿಂದ ಹೆಬ್ಬಾಳ ಕೆರೆಗೆ ಹರಿದು ಬರುತ್ತಿರುವ ರಾಸಾಯನಿಕ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಬೀತಿ ಸಾರ್ವಜನಿಕರಲ್ಲಿ ಮೂಡಿದೆ. ಅಲ್ಲದೆ ಇದರಿಂದ ಕೆರೆಯಲ್ಲಿರುವ ಸಾವಿರಾರು ಜಲಚರಗಳ ಮಾರಣಹೋಮಕ್ಕೆ ಕಾರಣವಾಗುತ್ತದೆ ಎಂಬ ಬೀತಿಯೂ ಶುರುವಾಗಿದೆ. ಮುಂದೊಂದು ದಿನ ಕೆರೆ ಸಂಪೂರ್ಣ ಕೊಳಚೆ ನೀರಿನ ಹೊಂಡ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ರಾಜಕಾಲುವೆಯಿಂದ ಕೊಳಚೆ ನೀರು : ಕೆರೆ ಸುತ್ತಲು ಇರುವ ಕಾರ್ಕಾನೆಗಳಿಂದ ಹೊರ ಬರುವ ರಾಸಾಯನಿಕ ನೀರು, ಹಾಗೂ ಸುತ್ತಲೂ ಇರುವ ಬಡಾವಣೆಗಳ ಯುಜಿಡಿ ನೀರು ರಾಜಕಾಲುವೆ ಮೂಲಕ ಹೆಬ್ಬಾಲ ಕೆರೆಗೆ ಬಂದು ಸೇರುತ್ತಿವೆ. ಈ ಎಲ್ಲಾ ಕಾರಣಗಳಿಂದ ಕೆರೆಯ ನೀರು ಕಲುಶಿತವಾಗುತ್ತಿದೆ.

ಅಧಿಕಾರಿಗಳ ನಿರ್ಲಕ್ಷ್ಯ : ಕೆರೆಯಲ್ಲಿ ಲಕ್ಷಾಂತರ ಮೀನುಗಳು ಸತ್ತು ಬಿದ್ದಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಯನ್ನು ಎತ್ತಿ ತೋರಿಸುತ್ತಿದೆ. ಸ್ಥಳಿಯರು ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

3 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

16 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

18 hours ago