Debt burden: Farmer commits suicide
ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು ಒಟ್ಟು 20 ಲಕ್ಷ ರೂ. ಕೈ ಸಾಲ ಪಡೆದಿದ್ದು , ಖಾಸಗಿ ಫೈನ್ಸ್ಗಳಿಂದಲೂ 9 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ನೀಡಿದ್ದವರು ಮರುಪಾವತಿಸಲು ಒತ್ತಾಯಿಸಿದ್ದರು.
ಆದರೆ, ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಯಿತು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…