ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಲ್ಲಿ ತಾಯಿ ಯಶೋದಮ್ಮ ಎಂಬವರ ಹೆಸರಿನಲ್ಲಿ 2.5 ಲಕ್ಷ ರೂ. ಹಾಗೂ ವೆಂಕಟೇಶ್ ತನ್ನ ಹೆಸರಿನಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದಲ್ಲದೆ, ಕೊಟಕ್ ಮಹೀಂದ್ರ ಬ್ಯಾಂಕ್ನಲ್ಲಿ 10 ಲಕ್ಷ ರೂ. ಟ್ರಾಕ್ಟರ್ ಸಾಲ ಮತ್ತು ಮನೆತನದ ಖರ್ಚಿಗಾಗಿ 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಮೀನಿನಲ್ಲಿ ಬೆಳೆ ಬೆಳೆದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂದಾಯ ಮತ್ತು ಕೃಷಿ ಅಧಿಕಾರಿಗಳು, ಹುಣಸೂರು ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ…
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https:karresults.nic.in ನಲ್ಲಿ…
ಟೆಲ್ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್ನಲ್ಲಿ ಇಸ್ರೇಲ್ ಏರ್ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ನ ಸೋದರಳಿಯ ಯೂಸುಫ್ ಹರ್ಷಿಯನ್ನು…