ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಲ್ಲಿ ತಾಯಿ ಯಶೋದಮ್ಮ ಎಂಬವರ ಹೆಸರಿನಲ್ಲಿ 2.5 ಲಕ್ಷ ರೂ. ಹಾಗೂ ವೆಂಕಟೇಶ್ ತನ್ನ ಹೆಸರಿನಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದಲ್ಲದೆ, ಕೊಟಕ್ ಮಹೀಂದ್ರ ಬ್ಯಾಂಕ್ನಲ್ಲಿ 10 ಲಕ್ಷ ರೂ. ಟ್ರಾಕ್ಟರ್ ಸಾಲ ಮತ್ತು ಮನೆತನದ ಖರ್ಚಿಗಾಗಿ 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಮೀನಿನಲ್ಲಿ ಬೆಳೆ ಬೆಳೆದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂದಾಯ ಮತ್ತು ಕೃಷಿ ಅಧಿಕಾರಿಗಳು, ಹುಣಸೂರು ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…