ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಲ್ಲಿ ತಾಯಿ ಯಶೋದಮ್ಮ ಎಂಬವರ ಹೆಸರಿನಲ್ಲಿ 2.5 ಲಕ್ಷ ರೂ. ಹಾಗೂ ವೆಂಕಟೇಶ್ ತನ್ನ ಹೆಸರಿನಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದಲ್ಲದೆ, ಕೊಟಕ್ ಮಹೀಂದ್ರ ಬ್ಯಾಂಕ್ನಲ್ಲಿ 10 ಲಕ್ಷ ರೂ. ಟ್ರಾಕ್ಟರ್ ಸಾಲ ಮತ್ತು ಮನೆತನದ ಖರ್ಚಿಗಾಗಿ 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಮೀನಿನಲ್ಲಿ ಬೆಳೆ ಬೆಳೆದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂದಾಯ ಮತ್ತು ಕೃಷಿ ಅಧಿಕಾರಿಗಳು, ಹುಣಸೂರು ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…