ಮೈಸೂರು: ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೇಯರ್ ಶಿವಕುಮಾರ್ ತಿಳಿಸಿದರು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಯಿತು.
ಕೆ.ಆರ್ ಮಾರುಕಟ್ಟೆ, ದೊಡ್ಡಗಡಿಯಾರ, ಪಾಲಿಕೆ ಕಟ್ಟಡ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಮಹಾರಾಣಿ ಕಾಲೇಜು ಕಟ್ಟಡ ಕುಸಿದಿತ್ತು.
ಇದೀಗ ಎಚ್ಚೆತ್ತುಕೊಂಡ ಮಹಾ ನಗರ ಪಾಲಿಕೆ, ನಗರದಲ್ಲಿರುವ ಹಲವಾರು ಪಾರಂಪರಿಕ ಕಟ್ಟಡಗಳ ಉಳಿಸಲು ಮೊದಲ ಪ್ರಾಶಸ್ತ್ಯ ಕೊಡಲು ಕ್ರಮ ವಹಿಸಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿರುವ ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯ ಸಭೆ ಕರೆದು ಎಲ್ಲರ ಅನುಮೋದನೆ ಪಡೆದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯಗಳನ್ನು ಮಾಡಲಾಗುತ್ತದೆ. ಇದನ್ನು ತ್ವರಿತವಾಗಿ ಕೈಗೆತ್ತಿಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…