ಮೈಸೂರು: ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೇಯರ್ ಶಿವಕುಮಾರ್ ತಿಳಿಸಿದರು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಯಿತು.
ಕೆ.ಆರ್ ಮಾರುಕಟ್ಟೆ, ದೊಡ್ಡಗಡಿಯಾರ, ಪಾಲಿಕೆ ಕಟ್ಟಡ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಮಹಾರಾಣಿ ಕಾಲೇಜು ಕಟ್ಟಡ ಕುಸಿದಿತ್ತು.
ಇದೀಗ ಎಚ್ಚೆತ್ತುಕೊಂಡ ಮಹಾ ನಗರ ಪಾಲಿಕೆ, ನಗರದಲ್ಲಿರುವ ಹಲವಾರು ಪಾರಂಪರಿಕ ಕಟ್ಟಡಗಳ ಉಳಿಸಲು ಮೊದಲ ಪ್ರಾಶಸ್ತ್ಯ ಕೊಡಲು ಕ್ರಮ ವಹಿಸಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿರುವ ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯ ಸಭೆ ಕರೆದು ಎಲ್ಲರ ಅನುಮೋದನೆ ಪಡೆದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯಗಳನ್ನು ಮಾಡಲಾಗುತ್ತದೆ. ಇದನ್ನು ತ್ವರಿತವಾಗಿ ಕೈಗೆತ್ತಿಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…