ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತು ಮಾಡುತ್ತಿರುವಾಗ ಹನಗೋಡು ಮತ್ತು ಅಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಕಾಡುಪ್ರಾಣಿಯಾದ ಎರಡು ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ ಕೊಂದು, ಮಾಂಸವನ್ನು ಸಾಗಾಣಿಕೆ ಮಾಡುತ್ತಿದ್ದ ಆಸಾಮಿಗಳಾದ ಎ. ಶ್ರೀನಿವಾಸ.ಎಂ ಬಿನ್ ಮಂಜೇಗೌಡ(ಅಲಿಯಾಸ್ ದಾಸ), ವಯಸ್ಸು-19 ವರ್ಷ, ಶಿಂಡೇನಹಳ್ಳಿ ಗ್ರಾಮ, ಎ2. ಶಿವು ಬಿನ್ ಲೇ. ಮಾದೇಶ (ಅಲಿಯಾಸ್ ಮಹೇಶ), ವಯಸ್ಸು-18 ವರ್ಷ, ಜಿಲ್ಲೇನಹೊಸಳ್ಳಿ ಗ್ರಾಮ, ಎ3. ಶ್ರೀನಿವಾಸ ಬಿನ್ ಸುಬ್ಬಾಚಾರಿ, ವಯಸ್ಸು-42 ವರ್ಷ, ಹನಗೋಡು ಗ್ರಾಮ, ಮತ್ತು ಎ4, ಬಸವಲಿಂಗಾಚಾರಿ ಬಿನ್ ಲೇ ಬಸವರಾಜಾಚಾರಿ, ವಯಸ್ಸು-36ವರ್ಷ, ಕಿರಂಗೂರು ಗ್ರಾಮ, ಸದರಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಳಿದ 06 ಆರೋಪಿಗಳು ತಲೆ ಮರೆಸಿಕೊಂಡಿದ್ದು. ಬಂಧಿತರಿಂದ 25 ಕೆ.ಜಿ. ಚುಕ್ಕೆ ಮಾಂಸ ಸೇರಿದಂತೆ ಕೃತ್ಯಕ್ಕೆ ಬಳಸಿದ ಹತ್ಯಾರು ಹಾಗೂ ಒಟ್ಟು ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಳಾ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…