ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ ಹಾಡಿಯ ನಾಗ ಬಿನ್ ಹೊನ್ನ, ಬಿಳಿಯ ಬಿನ್ ತಮ್ಮಣ್ಣಿ ಇವರು ಕಾಡಿನಲ್ಲಿ ಜಿಂಕೆಯೊಂದನ್ನು ಬೇಟೆಯಾಡಿ ಜಿಂಕೆ ಚರ್ಮವನ್ನು ಸುಲಿದು ಮಾಂಸವನ್ನಾಗಿ ಪರಿವರ್ತಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಸ್ತಗಿರಿ ಮಾಡಿ ನಾಗ ಬಿನ್ ಹೊನ್ನನನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಬಿಳಿಯ ಬಿನ್ ತಮ್ಮಣ್ಣಿ ಹಾಗೂ ರಾಜು ಕಾಡಿನಲ್ಲಿ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಯಿಂದ ಜಿಂಕೆಯ ಮೃತ ದೇಹ, ಜಿಂಕೆಯ ತಲೆ, ಜಿಂಕೆಯ ಚರ್ಮ ಸೇರಿದಂತೆ ಕತ್ತಿಗಳು, ಮಾಂಸವನ್ನು ಕಡಿಯಲು ಬಳಸುತ್ತಿದ್ದ 2 ಮರದ ಕೊಂಟು ಹಾಗೂ ಬಿಳಿಯ ಬಣ್ಣದ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…