ಮೈಸೂರು

ಜಿಂಕೆ ಬೇಟೆ: ಆರೋಪಿಯ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ ಹಾಡಿಯ ನಾಗ ಬಿನ್ ಹೊನ್ನ, ಬಿಳಿಯ ಬಿನ್ ತಮ್ಮಣ್ಣಿ ಇವರು ಕಾಡಿನಲ್ಲಿ ಜಿಂಕೆಯೊಂದನ್ನು ಬೇಟೆಯಾಡಿ ಜಿಂಕೆ ಚರ್ಮವನ್ನು ಸುಲಿದು ಮಾಂಸವನ್ನಾಗಿ ಪರಿವರ್ತಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಸ್ತಗಿರಿ ಮಾಡಿ ನಾಗ ಬಿನ್ ಹೊನ್ನನನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಬಿಳಿಯ ಬಿನ್ ತಮ್ಮಣ್ಣಿ ಹಾಗೂ ರಾಜು ಕಾಡಿನಲ್ಲಿ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಯಿಂದ ಜಿಂಕೆಯ ಮೃತ ದೇಹ, ಜಿಂಕೆಯ ತಲೆ, ಜಿಂಕೆಯ ಚರ್ಮ ಸೇರಿದಂತೆ ಕತ್ತಿಗಳು, ಮಾಂಸವನ್ನು ಕಡಿಯಲು ಬಳಸುತ್ತಿದ್ದ 2 ಮರದ ಕೊಂಟು ಹಾಗೂ ಬಿಳಿಯ ಬಣ್ಣದ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago