ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ ವೇಳೆ ಜಿಂಕೆಗಳ ಹಿಂಡು ಅರಣ್ಯದೊಳಕ್ಕೆ ಓಡಿವೆ. ಆದರೂ ಬಿಡದ ಬೀದಿ ನಾಯಿಗಳು ಒಂದು ಜಿಂಕೆಯನ್ನು ಬೇಟೆಯಾಡಿ ಕೊಂದು ಹಾಕಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೃತ ಜಿಂಕೆಯನ್ನು ಬೇರೆ ಕಡೆಗೆ ಸಾಗಿಸಿದ್ದಾರೆ.





