ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ
ಮಾ.19ರಂದು ದಿಲ್ಲಿಯ ರಾಮ್ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ
ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.
‘ಮಾರ್ಚ್ 19ರಂದು ಹೊಸದಿಲ್ಲಿಯ ರಾಮ್ಲೀಲಾ ಮೈದಾನದಲ್ಲಿ ದೇಶದ ಎಲ್ಲಾ ರೈತರ ಬೃಹತ್ ಸಮಾವೇಶ ನಡೆಸಲಾಗುವುದು. ರೈತರ ಸಹಿ ಸಂಗ್ರಹದ ಮನವಿಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹೊಸದಿಲ್ಲಿಯ ಗಡಿಯಲ್ಲಿ ರೈತರು ಚಳವಳಿ ನಡೆಸಿ ಸರ್ಕಾರವನ್ನು ಎಚ್ಚರಿಸಿದ್ದರು. ಆದರೂ ಗಂಭೀರವಾದ ಕ್ರಮವಾಗದ ಕಾರಣದಿಂದ ರಾಷ್ಟ್ರೀಯ ಸಂಚಾಲಕ ಜಗಜಿತ್ಸಿಂಗ್ ಡಲ್ಲೇವಾಲ್ 131 ದಿನ ಉಪವಾಸ ಸತ್ಯಾಗ್ರಹ ನಡೆಸಿದ ಪರಿಣಾಮ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನವಾಬ್ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಮಸ್ಯೆ ಪರಿಹಾರಕ್ಕೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಸಮಿತಿಯು ರೈತರ ಪರವಾಗಿ ವರದಿ ನೀಡಿದೆ. ಕೇಂದ್ರದ 31 ಮಂದಿಯ ಸಂಸದೀಯ ಸಮಿತಿಯೂ, ಎಂಎಸ್ಪಿ ಖಾತ್ರಿ ಕಾನೂನು ಜಾರಿಗೆ ಬೆಂಬಲಿಸಿದೆ. ಆದರೆ, ಈ ಬಗ್ಗೆ ಸರ್ಕಾರ ಚಕಾರವನ್ನೇ ಎತ್ತದಿರುವುದನ್ನು ಖಂಡಿಸಿ ಯಾತ್ರೆಗೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.
ಎಂಎಸ್ಪಿ ಖಾತರಿ ಕಾನೂನು ಇಲ್ಲದ ಕಾರಣ ವರ್ಷಕ್ಕೆ 15 ಲಕ್ಷ ಕೋಟಿ ನಷ್ಟವನ್ನು ನಮ್ಮ ದೇಶದ ರೈತರು ಅನುಭವಿಸುತ್ತಿದ್ದಾರೆ ಎಂದರು.
ಗೋಷ್ಠಿಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್ ಹಾಜರಿದ್ದರು.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…