ಮೈಸೂರು

ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯ

ಮೈಸೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಕೋವಿಡ್ ಕಾರಣ ಹೇಳಿ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿಯ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ, ಅಧಿಕಾರಕ್ಕೆ ಬಂ ದು ೨ ವರ್ಷ ೪ ತಿಂಗಳು ಕಳೆದರೂ ಒಳ ಮೀಸಲಾತಿ ಹೆಸರಿನಲ್ಲಿ ಯಾವುದೇ ನೇಮಕಾತಿಯನ್ನು ಮಾಡಿಲ್ಲ ಎಂದು ದೂರಿದರು.

ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ತುಂಬಿಕೊಂಡು ಪುಡಿಗಾಸಿಗೆ, ಉದ್ಯೋಗ ಭದ್ರತೆ ನೀಡದೇ ದುಡಿಸಿಕೊಳ್ಳಲಾಗುತ್ತಿದೆ. ಕೂಲಿ-ನಾಲಿ ಮಾಡಿ ಪೋಷಕರು ಮಕ್ಕಳಿಗೆ ಕೋಚಿಂಗ್ ಕೊಡಿ ಸುತ್ತಿದ್ದಾರೆ. ಗಂಭೀರ ಸಮಸ್ಯೆಗಳನ್ನು ಯುವಜನರು ಎದುರಿಸುತ್ತಿದ್ದರೂ ಸರ್ಕಾರಗಳು ಈ ಬಗ್ಗೆ ಮಾನವೀಯವಾಗಿ ವರ್ತಿಸುತ್ತಿಲ್ಲ. ಈಗಲಾದರೂ ಯಾವುದೇ ನೆಪಗಳನ್ನು ಹೇಳದೆ ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:-ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸಂಚಾಲಕರಾದ ನೀತುಶ್ರೀ, ಸಹ ಸಂಚಾಲಕರಾದ ಆದರ್ಶ್, ರಕ್ಷಿತ್, ಗಿರೀಶ್, ಟಿ.ಆರ್.ಸುನಿಲ್, ಎಸ್.ಸುಮಾ, ರಣಜಿತ್, ಪೂರ್ಣಿಮಾ, ಅನಿಲ್, ಸಿಂಚನ, ಪೃಥ್ವಿ, ರಜತ್, ಅನುಷ, ನಂಜುಂಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಹಕ್ಕೋತ್ತಾಯಗಳು
* ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು
* ನೇಮಕಾತಿಗಳಲ್ಲಿ ಅಕ್ರಮ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಲು ಸೂಕ್ತಕ್ರಮ ಕೈಗೊಳ್ಳಬೇಕು
* ಎಲ್ಲಾ ನೇಮಕಾತಿಗಳಿಗೂ ಅರ್ಹ ವಯೋಮಿತಿಯನ್ನು ಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಬೇಕು
* ಪೊಲೀಸ್ ಕಾನ್‌ಸ್ಟೇಬಲ್ ವಯೋಮಿತಿಯನ್ನು ಸಾಮಾನ್ಯ ವರ್ಗ ೩೦, ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಕ್ಕೆ ೩೩ ವರ್ಷಗಳಿಗೆ ಹೆಚ್ಚಿಸಬೇಕು
* ಇತ್ತೀಚೆಗೆ ಕೆಇಎ ಹೊರಡಿಸಿರುವ ನೋಟಿಫಿಕೇಶನ್‌ನಲ್ಲಿ ನಿಗದಿಪಡಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

55 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago