ಮೈಸೂರು

ಮೈಸೂರು ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಆಗ್ರಹ

ಮೈಸೂರು : ಜಾಗತಿಕ ಭಯೋತ್ಪಾದನೆಯನ್ನು ವಿಶ್ವದ ಎಲ್ಲ ವೇದಿಕೆಗಳಲ್ಲೂ ಖಂಡಿಸುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಂತರಿಕವಾಗಿ ದಲಿತರು, ಅಲ್ಪಸಂಖ್ಯಾತರ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಶಕ್ತಿಗಳಿಗೆ ಕುಮ್ಮಕ್ಕು ನೀಡುವಲ್ಲಿ ನಿರತವಾಗಿರುವುದು ವಿಪರ್ಯಾಸ ಎಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಜಗದೀಶ್ ಸೂರ್ಯ ಹೇಳಿದರು.

ಮೈಸೂರು ಜಿಲ್ಲೆಯ ಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಸಿಪಿಐ(ಎಂ) ವತಿಯಿಂದ ಭಾನುವಾರ ನಗರದ ಗಾಂಧಿ ವೃತ್ತದಲ್ಲಿ ನಡೆದ ರಾಜಕೀಯ ಪ್ರಚಾರಾಂದೋಲನ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಅರ್ಥ ವ್ಯವಸ್ಥೆಯು ಕಾರ್ಪೊರೇಟ್‌ಗಳ ಕೈವಶವಾಗಿದ್ದು, ಸಾಮಾನ್ಯ ಜನತೆಯ ಮೇಲೆ ನಡೆಯುವ ದಾಳಿಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಜನರ ಬದುಕು ದುರ್ಬರವಾಗಿದೆ. ಆರ್ಥಿಕತೆ ಧ್ವಂಸಗೊಂಡಿದೆ ಎಂದರು.

ಜನತೆಯ ಹಿತಾಸಕ್ತಿ ನಗಣ್ಯವಾಗಿ ಕೇವಲ ಕಾರ್ಪೊರೇಟ್ ಕುಳಗಳನ್ನು ಓಲೈಸುವ ಸರ್ಕಾರಗಳು ದುಡಿಯುವ ಜನರ ದುಮ್ಮಾನಗಳಿಗೆ ದನಿಯಾಗುತ್ತಿಲ್ಲ. ಜೀವಪರ ಸಂವೇದನೆಯನ್ನು ಹೊಂದಿಲ್ಲ. ಈ ರೀತಿಯ ವಿಷಮಕಾರಿ ಬೆಳವಣಿಗೆಗಳಿಂದಾಗಿ ಮೈಸೂರು ಜಿಲ್ಲೆಯ ಜನರ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯಲ್ಲಿ ಗಮನಾರ್ಹವಾದ ಬೆಳವಣಿಗೆಗಳೇನೂ ಆಗಿಲ್ಲ ಎಂದು ವಿಷಾದಿಸಿದರು.

ಸಿಪಿಐ ಮುಖಂಡ ಕೆ.ಬಸವರಾಜು ಮಾತನಾಡಿ, ಕನಿಷ್ಠ ಬೆಂಬಲ ಬೆಲೆಯನ್ನು ಅವೈಜ್ಞಾನಿಕ ವಿಧಾನದಿಂದ ನಿರ್ಧರಿಸುವ ಸರ್ಕಾರದ ಮಾನದಂಡಗಳಿಂದಾಗಿ ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ನಿರ್ಧರಿಸಲಾಗುತ್ತಿಲ್ಲ. ತೀವ್ರ ಆರ್ಥಿಕ ಒತ್ತಡಗಳಿಂದಾಗಿ ರೈತರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ 73 ರೈತರು ವಿಷ ಸೇವಿಸಿ ಅಸುನೀಗಿದ್ದಾರೆ. ಸಾಂಸ್ಥಿಕ ಸಾಲ ಮತ್ತು ರೈತ ಸ್ನೇಹಿ ಮಾರುಕಟ್ಟೆಯ ನಿರ್ಮಾಣ, ಜೊತೆಗೆ ನನೆಗುದಿಗೆ ಬಿದ್ದಿರುವ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಮೂಲಕ ಮೈಸೂರು ಜಿಲ್ಲೆಯ ರೈತರನ್ನು ಸಾವಿನ ಕುಣಿಕೆಯಿಂದ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಸರ್ಕಾರಿ ಕಾನೂನು ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು, ಮೈಸೂರು ನಗರದಲ್ಲಿ ಸಾರ್ವಜನಿಕ ಆರೋಗ್ಯವನ್ನು ಬಲಪಡಿಸಲು ವಾರ್ಡ್ ಕ್ಲಿನಿಕ್‌ಗಳನ್ನು ತೆರೆಯಬೇಕು, ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಿ ಬಲಪಡಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಲಾಯಿತು.

ಸಿಪಿಐ ಮುಖಂಡರಾದ ಲೀಲಾವತಿ, ಶಕುಂತಲಾ, ಗುರುಬಸವರಾಜು, ಯು.ಬಸವರಾಜು, ಸುನಂದಾ, ಜಿ.ಜಯರಾಂ ಮುಂತಾದವರು ಪ್ರಚಾರಾಂದೋಲನ ಸಭೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

3 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

3 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

3 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

3 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

3 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

3 hours ago