sc st protest
ಮೈಸೂರು : ಪರಿಶಿಷ್ಟ ಜಾತಿಯ ವೈಜ್ಞಾನಿಕ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿ ತಡೆಹಿಡಿದು, ತಕ್ಷಣವೇ ಉಪ-ಸಮಿತಿ ನೇಮಿಸಿ ಹೊಲೆಯ(ಬಲಗೈ) ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಗಾಂಧಿನಗರ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಕುರಿತು ಸರ್ಕಾರಕ್ಕೆ ಸಲ್ಲಿಸಿರುವ ವರದಿಯ ಪ್ರಮುಖ ಅಂಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೈಜ್ಞಾನಿಕ ವಾಗಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಬದಲು ಆರ್ಥಿಕ ಮತ್ತು ರಾಜಕೀಯ ಅಂಶಗಳನ್ನು ಸೇರಿಸಿ ಕೊಂಡು ಅವೈಜ್ಞಾನಿಕವಾಗಿ ದೋಷಪೂರಿತ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ 101 ಜಾತಿಗಳನ್ನು ವರ್ಗೀಕರಣ ಮಾಡಲಾಗಿದೆ. ಹೊಲೆಯ ಮತ್ತು ಅದೇ ರೀತಿಯ ಸಾಮಾಜಿಕ ಅಂಶಗಳನ್ನು ಒಳಗೊಂಡ ಕೆಲವು ಜಾತಿಗಳನ್ನು ಪ್ರವರ್ಗ-ಸಿನಲ್ಲಿ ಇರಿಸಿ ಇದೇ ಸಾಮಾಜಿಕ ಅಂಶಗಳನ್ನು ಒಳಗೊಂಡ ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಅಂದರೆ, ಮಾದಿಗ ಸಂಬಂಧಿತ ಜಾತಿಗಳ ಪೆಟ್ಟಿಗೆ ಸೇರಿಸಿ ಈ ಮೂಲಕ ಹೊಲೆಯ ಸಂಬಂಧಿತ ಜಾತಿಗಳ ಸಂಖ್ಯೆ ಯನ್ನು ಕಡಿಮೆ ಬರುವಂತೆ ಮಾಡಿ ಒಳ ಮೀಸಲಾತಿ ವರ್ಗಿಕರಣದ ಹೆಸರಿನಲ್ಲಿ ಅನ್ಯಾಯವೆಸಗಿದ್ದಾರೆ ಎಂದು ಕಿಡಿಕಾರಿದರು.
ಪ್ರವರ್ಗ-ಇ ಎಂಬ ವರ್ಗವನ್ನು ಮಾಡಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ಹೆಸರಿನ ಜಾತಿ ಸೂಚಕ ಗುಂಪುಗಳನ್ನು ಸೃಷ್ಟಿಸಿ ಈ ಮೂಲಕ ಹೊಲೆಯ ಸಮುದಾಯದಿಂದ ಆದಿ ಕರ್ನಾಟಕದಲ್ಲಿ ಗುರುತಿಸಿಕೊಂಡಿರುವ ಬಲಗೈ ಸಮುದಾಯವನ್ನು ಪ್ರತ್ಯೇಕಿಸಿ ಇಲ್ಲಿಯೂ ಹೊಲೆಯ(ಬಲಗೈ) ಸಮುದಾಯವನ್ನು ವಂಚಿಸಲಾಗುತ್ತಿದೆ. ವೈಜ್ಞಾನಿಕ ವರ್ಗೀಕರಣದ ಹೆಸರಿನಲ್ಲಿ ಹೊಲೆಯ ಸಂಬಂಧಿತ ಜಾತಿಗಳನ್ನು ಮಾದಿಗ ಸಂಬಂಧಿತ ಜಾತಿಗಳ ಪಟ್ಟಿಗೆ ಸೇರ್ಪಡೆ ಮಾಡಿರುವುದು ಸಾಮಾಜಿಕ ನ್ಯಾಯದ ಮೂಲತತ್ವಕ್ಕೆ ವಿರುದ್ಧವಾಗಿದೆ. ಪ್ರವರ್ಗ-ಎ ಅಡಿಯಲ್ಲಿ 51 ಜಾತಿಗಳನ್ನು ನಮೂದಿಸಿದ್ದು, ಹೊಲೆಯ ಸಂಬಂಧಿತ ಸಮುದಾಯದ ಜನಸಂಖ್ಯೆ ಕಡಿಮೆಯಾಗುವಂತೆ ಮಾಡಿ ಆ ಮೂಲಕ ಒಳ ಮೀಸಲಾತಿ ವೈಜ್ಞಾನಿಕ ವರ್ಗೀಕರಣದ ಹೆಸರಿನಲ್ಲಿ ಹೊಲೆಯ ಸಮುದಾಯವನ್ನು ವಂಚಿಸಿದ್ದಾರೆ ಎಂದು ದೂರಿದರು.
ಕರ್ನಾಟಕ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್, ಮಾಜಿ ಮಹಾಪೌರ ಪುರುಷೋತ್ತಮ್, ಅಶೋಕಪುರಂ ಪೈ.ಕೃಷ್ಣ, ಸಿದ್ದಸ್ವಾಮಿ, ಎಂ.ವಿ.ಚಂದ್ರಶೇಖರ್, ವಿಷ್ಣುವರ್ಧನ, ಚೇತನ್, ಎ.ಆರ್.ಕಾಂತರಾಜ್, ಡಾ.ಮರಿದೇವಯ್ಯ, ಹರಿಹರ ಆನಂದಸ್ವಾಮಿ, ನಾಗವಾಲ ನರೇಂದ್ರ, ಚಂದ್ರಶೇಖರಯ್ಯ, ಸಿದ್ದಪ್ಪ, ಶಂಕರ್, ಭರತ್, ಪುಟ್ಟಯ್ಯ, ಅಶೋಕಪುರಂ ಮಹೇಶ್, ಹನಸೋಗೆ ನಾಗರಾಜು, ಕಿರಣ್, ಆನಂದ್, ನಂಜುಂಡಸ್ವಾಮಿ, ಶಿವಶಂಕರ್, ಗಂಗಾಧರ್, ಪ್ರಭು, ದಿಲೀಪ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…